<p><strong>ಬೆಂಗಳೂರು:</strong> ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹62.52 ಕೋಟಿ ಅಂದಾಜು ಮೌಲ್ಯದ ಒಟ್ಟು 14 ಎಕರೆ 10 ಗುಂಟೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.</p>.<p>ತಾಲ್ಲೂಕುಗಳ ತಹಶೀಲ್ದಾರ್ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸ್ಮಶಾನ, ಸರ್ಕಾರಿ ಕೆರೆ, ಸರ್ಕಾರಿ ಜಾಗ, ಖರಾಬು ತೋಪು ಹಾಗೂ ಸರ್ಕಾರಿ ಕಟ್ಟೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.</p>.<p>ಪೂರ್ವ ತಾಲ್ಲೂಕಿನ ವರ್ತೂರು ಹೋಬಳಿಯ ದೊಡ್ಡನೆಕ್ಕುಂದಿ ಗ್ರಾಮದ ಸ.ನಂ 197ರ ಸ್ಮಶಾನ, ಭೋಗನಹಳ್ಳಿ ಗ್ರಾಮದ ಸ.ನಂ 33 ರ ಸ್ಮಶಾನ, ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ತಟಗುಪ್ಪೆ ಗ್ರಾಮದ ಸ.ನಂ 79 ರ ಸರ್ಕಾರಿ ಕೆರೆ, ತಾವರೆಕೆರೆ ಹೋಬಳಿಯ ಹುಲುವೇನಹಳ್ಳಿ ಗ್ರಾಮದ ಸ.ನಂ 8/1ಬಿ ಸರ್ಕಾರಿ ಜಾಗ, ಬೇಗೂರು ಹೋಬಳಿಯ ಸಿಂಗಸಂದ್ರ ಗ್ರಾಮದ ಸ.ನಂ 100 ರ ಸರ್ಕಾರಿ ಕೆರೆ ಒತ್ತುವರಿಯನ್ನು ತೆರವುಗೊಳಿಸಲಾಯಿತು.</p>.<p>ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಇಟ್ಟಗಲಾಪುರ ಗ್ರಾಮದ ಸ.ನಂ 38 ರ ಸರ್ಕಾರಿ ಕೆರೆ, ಕಾಕೋಳು ಗ್ರಾಮದ ಸ.ನಂ 44 ರ ಸರ್ಕಾರಿ ಕೆರೆ, ಜಾಲ ಹೋಬಳಿಯ ಬಾಗಲೂರು ಗ್ರಾಮದ ಸ.ನಂ 311ರ ಖರಾಬು ತೋಪು, ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ವಡೇರಹಳ್ಳಿ ಗ್ರಾಮದ ಸ.ನಂ 12ರ ಸರ್ಕಾರಿ ಕಟ್ಟೆ ಒತ್ತುವರಿಯನ್ನು ತೆರವುಗೊಳಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹62.52 ಕೋಟಿ ಅಂದಾಜು ಮೌಲ್ಯದ ಒಟ್ಟು 14 ಎಕರೆ 10 ಗುಂಟೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.</p>.<p>ತಾಲ್ಲೂಕುಗಳ ತಹಶೀಲ್ದಾರ್ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸ್ಮಶಾನ, ಸರ್ಕಾರಿ ಕೆರೆ, ಸರ್ಕಾರಿ ಜಾಗ, ಖರಾಬು ತೋಪು ಹಾಗೂ ಸರ್ಕಾರಿ ಕಟ್ಟೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.</p>.<p>ಪೂರ್ವ ತಾಲ್ಲೂಕಿನ ವರ್ತೂರು ಹೋಬಳಿಯ ದೊಡ್ಡನೆಕ್ಕುಂದಿ ಗ್ರಾಮದ ಸ.ನಂ 197ರ ಸ್ಮಶಾನ, ಭೋಗನಹಳ್ಳಿ ಗ್ರಾಮದ ಸ.ನಂ 33 ರ ಸ್ಮಶಾನ, ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ತಟಗುಪ್ಪೆ ಗ್ರಾಮದ ಸ.ನಂ 79 ರ ಸರ್ಕಾರಿ ಕೆರೆ, ತಾವರೆಕೆರೆ ಹೋಬಳಿಯ ಹುಲುವೇನಹಳ್ಳಿ ಗ್ರಾಮದ ಸ.ನಂ 8/1ಬಿ ಸರ್ಕಾರಿ ಜಾಗ, ಬೇಗೂರು ಹೋಬಳಿಯ ಸಿಂಗಸಂದ್ರ ಗ್ರಾಮದ ಸ.ನಂ 100 ರ ಸರ್ಕಾರಿ ಕೆರೆ ಒತ್ತುವರಿಯನ್ನು ತೆರವುಗೊಳಿಸಲಾಯಿತು.</p>.<p>ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಇಟ್ಟಗಲಾಪುರ ಗ್ರಾಮದ ಸ.ನಂ 38 ರ ಸರ್ಕಾರಿ ಕೆರೆ, ಕಾಕೋಳು ಗ್ರಾಮದ ಸ.ನಂ 44 ರ ಸರ್ಕಾರಿ ಕೆರೆ, ಜಾಲ ಹೋಬಳಿಯ ಬಾಗಲೂರು ಗ್ರಾಮದ ಸ.ನಂ 311ರ ಖರಾಬು ತೋಪು, ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ವಡೇರಹಳ್ಳಿ ಗ್ರಾಮದ ಸ.ನಂ 12ರ ಸರ್ಕಾರಿ ಕಟ್ಟೆ ಒತ್ತುವರಿಯನ್ನು ತೆರವುಗೊಳಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>