<p><strong>ಬೆಂಗಳೂರು</strong>: ಹೂಡಿಕೆ ಹೆಸರಿನಲ್ಲಿ ನಗರದ ವ್ಯಕ್ತಿಯೊಬ್ಬರಿಗೆ ಒಟ್ಟು ₹1.92 ಕೋಟಿ ವಂಚನೆ ಮಾಡಿದ್ದು, ಈ ಬಗ್ಗೆ ಕೇಂದ್ರ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘2021ರಲ್ಲಿ ಅಪರಚಿತ ವ್ಯಕ್ತಿ ದೂರುದಾರರಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದರು. ಹಣ ಹೂಡಿಕೆ ಮಾಡಿ ಹೆಚ್ಚು ಲಾಭಗಳಿಸಬಹುದು ಎಂದು ಆಮಿಷವೊಡ್ಡಿದ್ದರು. ಇದನ್ನು ನಂಬಿದ ದೂರುದಾರ ಆರೋಪಿ ಕಳಿಸಿದ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ₹1.50 ಕೋಟಿ ಹೂಡಿಕೆ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು. </p>.<p>‘2024ರಲ್ಲಿ ಅದೇ ವ್ಯಕ್ತಿ ದೂರುದಾರರಿಗೆ ಕರೆ ಮಾಡಿ, 2021ರಲ್ಲಿ ನೀವು ಹೂಡಿಕೆ ಮಾಡಿದ್ದ ₹1.50 ಕೋಟಿಗೆ ₹5.89 ಕೋಟಿ ಲಾಭ ಬಂದಿದೆ. ಈ ಹಣ ನಿಮ್ಮ ಖಾತೆಗೆ ಜಮೆ ಮಾಡಲು ಐಟಿ ಸೇರಿದಂತೆ ವಿವಿಧ ಶುಲ್ಕಗಳನ್ನು ಪಾವತಿಸಲು ₹42.37 ಲಕ್ಷ ಪಾವತಿಸಬೇಕು ಎಂದಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘₹5.89 ಕೋಟಿ ಪಡೆದುಕೊಳ್ಳಲು ಆರೋಪಿ ಹೇಳಿದ ಬ್ಯಾಂಕ್ ಖಾತೆಗೆ ದೂರುದಾರರು ಹಂತ–ಹಂತವಾಗಿ ₹42.37 ಲಕ್ಷ ಪಾವತಿಸಿದ್ದಾರೆ. ಆದರೆ, ಯಾವುದೇ ರೀತಿ ಹಣ ಖಾತೆಗೆ ಜಮೆ ಆಗಿಲ್ಲ. ಆರೋಪಿಗಳನ್ನು ಸಂಪರ್ಕಕ್ಕೂ ಸಿಗಲಿಲ್ಲ. ಆದ್ದರಿಂದ ನನಗೆ ಮೋಸ ಮಾಡಿರುವ ಅಪರಿಚಿತ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರ ಪ್ರಕರಣ ದಾಖಲಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೂಡಿಕೆ ಹೆಸರಿನಲ್ಲಿ ನಗರದ ವ್ಯಕ್ತಿಯೊಬ್ಬರಿಗೆ ಒಟ್ಟು ₹1.92 ಕೋಟಿ ವಂಚನೆ ಮಾಡಿದ್ದು, ಈ ಬಗ್ಗೆ ಕೇಂದ್ರ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘2021ರಲ್ಲಿ ಅಪರಚಿತ ವ್ಯಕ್ತಿ ದೂರುದಾರರಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದರು. ಹಣ ಹೂಡಿಕೆ ಮಾಡಿ ಹೆಚ್ಚು ಲಾಭಗಳಿಸಬಹುದು ಎಂದು ಆಮಿಷವೊಡ್ಡಿದ್ದರು. ಇದನ್ನು ನಂಬಿದ ದೂರುದಾರ ಆರೋಪಿ ಕಳಿಸಿದ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ₹1.50 ಕೋಟಿ ಹೂಡಿಕೆ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು. </p>.<p>‘2024ರಲ್ಲಿ ಅದೇ ವ್ಯಕ್ತಿ ದೂರುದಾರರಿಗೆ ಕರೆ ಮಾಡಿ, 2021ರಲ್ಲಿ ನೀವು ಹೂಡಿಕೆ ಮಾಡಿದ್ದ ₹1.50 ಕೋಟಿಗೆ ₹5.89 ಕೋಟಿ ಲಾಭ ಬಂದಿದೆ. ಈ ಹಣ ನಿಮ್ಮ ಖಾತೆಗೆ ಜಮೆ ಮಾಡಲು ಐಟಿ ಸೇರಿದಂತೆ ವಿವಿಧ ಶುಲ್ಕಗಳನ್ನು ಪಾವತಿಸಲು ₹42.37 ಲಕ್ಷ ಪಾವತಿಸಬೇಕು ಎಂದಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘₹5.89 ಕೋಟಿ ಪಡೆದುಕೊಳ್ಳಲು ಆರೋಪಿ ಹೇಳಿದ ಬ್ಯಾಂಕ್ ಖಾತೆಗೆ ದೂರುದಾರರು ಹಂತ–ಹಂತವಾಗಿ ₹42.37 ಲಕ್ಷ ಪಾವತಿಸಿದ್ದಾರೆ. ಆದರೆ, ಯಾವುದೇ ರೀತಿ ಹಣ ಖಾತೆಗೆ ಜಮೆ ಆಗಿಲ್ಲ. ಆರೋಪಿಗಳನ್ನು ಸಂಪರ್ಕಕ್ಕೂ ಸಿಗಲಿಲ್ಲ. ಆದ್ದರಿಂದ ನನಗೆ ಮೋಸ ಮಾಡಿರುವ ಅಪರಿಚಿತ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರ ಪ್ರಕರಣ ದಾಖಲಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>