ಹತ್ತು ದಿನಗಳ ಕಾಲ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ದೇವಾನುದೇವತೆಗಳನ್ನು ಆಹ್ವಾನಿಸುವ ಸಂಕೇತವಾಗಿ ಚಿನ್ನದ ಧ್ವಜಸ್ತಂಭದ ಮೇಲೆ ಗರುಡ ಪಟ ಏರಿಸಲಾಯಿತು. ಮಾರ್ಚ್ 26ರಂದು ರಾತ್ರಿ 8 ಗಂಟೆಗೆ ಚೆಲುವನಾರಾಯಣಸ್ವಾಮಿಗೆ ವೈರಮುಡಿ ಧಾರಣೆ ಮಾಡಲಾಗುತ್ತದೆ. ಮಾರ್ಚ್ 28ರಂದು ಗಜೇಂದ್ರಮೋಕ್ಷ, ಗಜ ಮತ್ತು ಅಶ್ವವಾಹನೋತ್ಸವ ನಡೆಯಲಿವೆ. ಮಾರ್ಚ್ 29ರಂದು ಮಹಾರಥೋತ್ಸವ, ಬಂಗಾರದ ಪಲ್ಲಕ್ಕಿ ಸೇವೆ ನಡೆಯಲಿವೆ. ಮಾರ್ಚ್ 30ರಂದು ರಾತ್ರಿ ಚೆಲುವನಾರಾಯಣನಿಗೆ ರಾಜಮುಡಿ ಧಾರಣೆ, ತೆಪ್ಪೋತ್ಸವ ನಡೆಯಲಿದೆ. 31ರಂದು ಸಂಧಾನಸೇವೆ, ಕಲ್ಯಾಣಿಯಲ್ಲಿ ತೀರ್ಥಸ್ನಾನ ನಡೆಯಲಿದೆ.