<p><strong>ಬೆಂಗಳೂರು:</strong> ಕೇಂದ್ರ ಗೃಹ ಸಚಿವ ಸುಶೀಲ್ಕುಮಾರ್ ಶಿಂಧೆ ಅಧ್ಯಕ್ಷತೆಯಲ್ಲಿ ಇದೇ 16ರಂದು ನಗರದಲ್ಲಿ ನಡೆಯಲಿರುವ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸಾರಿಗೆ, ತೆರಿಗೆ ವ್ಯವಸ್ಥೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ.<br /> <br /> ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಎನ್.ಕಿರಣ್ಕುಮಾರ್ ರೆಡ್ಡಿ (ಆಂಧ್ರ), ಉಮ್ಮನ್ ಚಾಂಡಿ (ಕೇರಳ), ಜೆ.ಜಯಲಲಿತಾ (ತಮಿಳುನಾಡು) ಮತ್ತು ಎನ್.ರಂಗಸ್ವಾಮಿ (ಪುದುಚೇರಿ) ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.<br /> <br /> ಹಿಂದೆ ಪುದುಚೇರಿ ಮತ್ತು ಹೈದರಾಬಾದ್ನಲ್ಲಿ ನಡೆದ ಸಭೆಯ ಶಿಫಾರಸುಗಳ ಅನುಷ್ಠಾನ ಕುರಿತು ಈ ಸಭೆಯಲ್ಲಿ ಅವಲೋಕನ ನಡೆಯಲಿದೆ. ಅಲ್ಲದೇ ಗ್ರಾಮೀಣಾಭಿವೃದ್ಧಿ, ಬಡತನ ನಿರ್ಮೂಲನೆ ಮೊದಲಾದ ಯೋಜನೆಗಳಿಗೆ ಕೇಂದ್ರದಿಂದ ಹಂಚಿಕೆಯಾಗಿರುವ ಅನುದಾನದ ಬಳಕೆ ಸೇರಿದಂತೆ ಹಲವು ವಿಷಯಗಳ ಕುರಿತು ಸಮಾಲೋಚನೆ ನಡೆಯಲಿದೆ.<br /> <br /> ಪೊಲೀಸ್ ವ್ಯವಸ್ಥೆಯ ಸುಧಾರಣೆ, ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳ ಸ್ಥಿತಿಗತಿ, ಮಂಗಳೂರು - ಉಡುಪಿ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ವಿಸ್ತರಣೆ, ಕರಾವಳಿ ಪ್ರದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ, ಪ್ರವಾಸೋದ್ಯಮ, ಮೀನುಗಾರಿಕೆಗೆ ಪ್ರೋತ್ಸಾಹ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರ ಗೃಹ ಸಚಿವ ಸುಶೀಲ್ಕುಮಾರ್ ಶಿಂಧೆ ಅಧ್ಯಕ್ಷತೆಯಲ್ಲಿ ಇದೇ 16ರಂದು ನಗರದಲ್ಲಿ ನಡೆಯಲಿರುವ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸಾರಿಗೆ, ತೆರಿಗೆ ವ್ಯವಸ್ಥೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ.<br /> <br /> ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಎನ್.ಕಿರಣ್ಕುಮಾರ್ ರೆಡ್ಡಿ (ಆಂಧ್ರ), ಉಮ್ಮನ್ ಚಾಂಡಿ (ಕೇರಳ), ಜೆ.ಜಯಲಲಿತಾ (ತಮಿಳುನಾಡು) ಮತ್ತು ಎನ್.ರಂಗಸ್ವಾಮಿ (ಪುದುಚೇರಿ) ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.<br /> <br /> ಹಿಂದೆ ಪುದುಚೇರಿ ಮತ್ತು ಹೈದರಾಬಾದ್ನಲ್ಲಿ ನಡೆದ ಸಭೆಯ ಶಿಫಾರಸುಗಳ ಅನುಷ್ಠಾನ ಕುರಿತು ಈ ಸಭೆಯಲ್ಲಿ ಅವಲೋಕನ ನಡೆಯಲಿದೆ. ಅಲ್ಲದೇ ಗ್ರಾಮೀಣಾಭಿವೃದ್ಧಿ, ಬಡತನ ನಿರ್ಮೂಲನೆ ಮೊದಲಾದ ಯೋಜನೆಗಳಿಗೆ ಕೇಂದ್ರದಿಂದ ಹಂಚಿಕೆಯಾಗಿರುವ ಅನುದಾನದ ಬಳಕೆ ಸೇರಿದಂತೆ ಹಲವು ವಿಷಯಗಳ ಕುರಿತು ಸಮಾಲೋಚನೆ ನಡೆಯಲಿದೆ.<br /> <br /> ಪೊಲೀಸ್ ವ್ಯವಸ್ಥೆಯ ಸುಧಾರಣೆ, ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳ ಸ್ಥಿತಿಗತಿ, ಮಂಗಳೂರು - ಉಡುಪಿ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ವಿಸ್ತರಣೆ, ಕರಾವಳಿ ಪ್ರದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ, ಪ್ರವಾಸೋದ್ಯಮ, ಮೀನುಗಾರಿಕೆಗೆ ಪ್ರೋತ್ಸಾಹ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>