<p><strong>ಬೆಂಗಳೂರು:</strong> ರೆಸ್ಟೋರೆಂಟ್ ಹೆಸರಿನಲ್ಲಿ ಲೈವ್ ಬ್ಯಾಂಡ್ ನಡೆಸುತ್ತಿದ್ದ ಪ್ಯಾಲೇಸ್ ಗುಟ್ಟಹಳ್ಳಿ ಸಮೀಪದ ವಿನಾಯಕ ವೃತ್ತದ ‘ಶ್ರೀನಿವಾಸ್ ಬಾರ್ ಆ್ಯಂಡ್ ರೆಸ್ಟೋರೆಂಟ್ (ಆರೆಂಜ್)’ ಮೇಲೆ ಶುಕ್ರವಾರ ರಾತ್ರಿ ದಾಳಿ ನಡೆಸಿದ ಸಿಸಿಬಿ ಪೊಲೀಸರು, 17 ಮಂದಿಯನ್ನು ಬಂಧಿಸಿದ್ದಾರೆ.</p>.<p>ಬಾರ್ ವ್ಯವಸ್ಥಾಪಕರಾದ ಬಂಟ್ವಾಳ ತಾಲ್ಲೂಕಿನ ಸಂತೋಷ್ (33), ಉಮೇಶ್ (33), ರಮೇಶ್ (31), ಮಂಡ್ಯ ಜಿಲ್ಲೆಯ ಅಭಿಷೇಕ್ ಅಲಿಯಾಸ್ ಅಭಿ (28) ಹಾಗೂ 13 ಗ್ರಾಹಕರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ₹ 1.31 ಲಕ್ಷ ನಗದು, 19 ಮೊಬೈಲ್ಗಳು ಹಾಗೂ ₹ 2.50 ಲಕ್ಷ ಮೌಲ್ಯದ ಸಂಗೀತ ಪರಿಕರಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.</p>.<p>‘ದಾಳಿ ವೇಳೆ ಲೈವ್ಬ್ಯಾಂಡ್ ಮಾಲೀಕ ವೆಂಕಟೇಶ್ ತಲೆಮರೆಸಿಕೊಂಡಿದ್ದಾನೆ. ಅಲ್ಲಿ ನೃತ್ಯ ಮಾಡುತ್ತಿದ್ದ ದೆಹಲಿಯ ಹತ್ತು ಯುವತಿಯರನ್ನು ವಶಕ್ಕೆ ಪಡೆದು, ಬುದ್ಧಿ ಹೇಳಿ ಬಿಟ್ಟು ಕಳುಹಿಸಲಾಗಿದೆ’ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದರು.</p>.<p>‘ಉತ್ತಮ ಕೆಲಸ ಕೊಡಿಸುವುದಾಗಿ ಯುವತಿಯರನ್ನು ನಗರಕ್ಕೆ ಕರೆಸಿಕೊಂಡಿದ್ದ ಮಾಲೀಕರು, ಅವರ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲ ನೃತ್ಯ ಮಾಡಿಸುತ್ತಿದ್ದರು. ಗ್ರಾಹಕರನ್ನು ಯುವತಿಯರ ಹತ್ತಿರಕ್ಕೆ ಹೋಗಲು ಬಿಟ್ಟು, ಅವರ ಮೇಲೆ ನೋಟುಗಳನ್ನು ಎಸೆಯಲು ಪ್ರಚೋದಿಸುತ್ತಿದ್ದರು. ಈ ಮೂಲಕ ಅಕ್ರಮ ಸಂಪಾದನೆಗೆ ಇಳಿದಿದ್ದರು. ಬಂಧಿತರ ವಿರುದ್ಧ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಗ್ರಾಹಕರ ಪೂರ್ವಾಪರ ಕಲೆಹಾಕಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರೆಸ್ಟೋರೆಂಟ್ ಹೆಸರಿನಲ್ಲಿ ಲೈವ್ ಬ್ಯಾಂಡ್ ನಡೆಸುತ್ತಿದ್ದ ಪ್ಯಾಲೇಸ್ ಗುಟ್ಟಹಳ್ಳಿ ಸಮೀಪದ ವಿನಾಯಕ ವೃತ್ತದ ‘ಶ್ರೀನಿವಾಸ್ ಬಾರ್ ಆ್ಯಂಡ್ ರೆಸ್ಟೋರೆಂಟ್ (ಆರೆಂಜ್)’ ಮೇಲೆ ಶುಕ್ರವಾರ ರಾತ್ರಿ ದಾಳಿ ನಡೆಸಿದ ಸಿಸಿಬಿ ಪೊಲೀಸರು, 17 ಮಂದಿಯನ್ನು ಬಂಧಿಸಿದ್ದಾರೆ.</p>.<p>ಬಾರ್ ವ್ಯವಸ್ಥಾಪಕರಾದ ಬಂಟ್ವಾಳ ತಾಲ್ಲೂಕಿನ ಸಂತೋಷ್ (33), ಉಮೇಶ್ (33), ರಮೇಶ್ (31), ಮಂಡ್ಯ ಜಿಲ್ಲೆಯ ಅಭಿಷೇಕ್ ಅಲಿಯಾಸ್ ಅಭಿ (28) ಹಾಗೂ 13 ಗ್ರಾಹಕರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ₹ 1.31 ಲಕ್ಷ ನಗದು, 19 ಮೊಬೈಲ್ಗಳು ಹಾಗೂ ₹ 2.50 ಲಕ್ಷ ಮೌಲ್ಯದ ಸಂಗೀತ ಪರಿಕರಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.</p>.<p>‘ದಾಳಿ ವೇಳೆ ಲೈವ್ಬ್ಯಾಂಡ್ ಮಾಲೀಕ ವೆಂಕಟೇಶ್ ತಲೆಮರೆಸಿಕೊಂಡಿದ್ದಾನೆ. ಅಲ್ಲಿ ನೃತ್ಯ ಮಾಡುತ್ತಿದ್ದ ದೆಹಲಿಯ ಹತ್ತು ಯುವತಿಯರನ್ನು ವಶಕ್ಕೆ ಪಡೆದು, ಬುದ್ಧಿ ಹೇಳಿ ಬಿಟ್ಟು ಕಳುಹಿಸಲಾಗಿದೆ’ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದರು.</p>.<p>‘ಉತ್ತಮ ಕೆಲಸ ಕೊಡಿಸುವುದಾಗಿ ಯುವತಿಯರನ್ನು ನಗರಕ್ಕೆ ಕರೆಸಿಕೊಂಡಿದ್ದ ಮಾಲೀಕರು, ಅವರ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲ ನೃತ್ಯ ಮಾಡಿಸುತ್ತಿದ್ದರು. ಗ್ರಾಹಕರನ್ನು ಯುವತಿಯರ ಹತ್ತಿರಕ್ಕೆ ಹೋಗಲು ಬಿಟ್ಟು, ಅವರ ಮೇಲೆ ನೋಟುಗಳನ್ನು ಎಸೆಯಲು ಪ್ರಚೋದಿಸುತ್ತಿದ್ದರು. ಈ ಮೂಲಕ ಅಕ್ರಮ ಸಂಪಾದನೆಗೆ ಇಳಿದಿದ್ದರು. ಬಂಧಿತರ ವಿರುದ್ಧ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಗ್ರಾಹಕರ ಪೂರ್ವಾಪರ ಕಲೆಹಾಕಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>