ಬೆಂಗಳೂರು: ವೀರಶೈವ ಧರ್ಮದ ತತ್ವವನ್ನು ಒಳಗೊಂಡ ‘ಸಿದ್ಧಾಂತ ಶಿಖಾಮಣಿ’ ಗ್ರಂಥವು 18 ಭಾರತೀಯ ಭಾಷೆಗಳು ಮತ್ತು ಕೆಲವು ಅಂತರ ರಾಷ್ಟ್ರೀಯ ಭಾಷೆಗಳಿಗೆ ತರ್ಜುಮೆಗೊಂಡಿದ್ದು, ಇದೇ 16ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.