<p><strong>ಬೆಂಗಳೂರು</strong>: ನಗದು ಹಣವನ್ನು ಡಾಲರ್ಗೆ ಪರಿವರ್ತಿಸಿಕೊಡುವುದಾಗಿ ನಂಬಿಸಿ ಉದ್ಯಮಿಯನ್ನು ಕರೆಸಿಕೊಂಡು ಮಾರಕಾಸ್ತ್ರ ತೋರಿಸಿ ಹಣ ಸುಲಿಗೆ ಮಾಡಿದ್ದ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>.<p>ಬೆಂಜಮಿನ್ ಹರ್ಷ, ರಕ್ಷಿತ್, ಪ್ರಕಾಶ್ ಹಾಗೂ ಭರತ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ₹ 2 ಕೋಟಿ ಸುಲಿಗೆ ನಡೆಸಲಾಗಿದೆ ಎಂದು ಆರೋಪಿಸಿ ಉದ್ಯಮಿ ವಿ.ಶ್ರೀಹರ್ಷ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಕೆಂಗೇರಿ ನಿವಾಸಿ ಶ್ರೀಹರ್ಷ ಅವರು ಆಯಿಲ್ ಉದ್ಯಮ ಘಟಕ ಸ್ಥಾಪಿಸುವ ನಿಟ್ಟಿನಲ್ಲಿ ಹಣ ಇಟ್ಟುಕೊಂಡಿದ್ದರು. ಘಟಕ ನಿರ್ಮಾಣಕ್ಕೆ ಅಗತ್ಯವಿರುವ ಯಂತ್ರೋಪಕರಣಗಳನ್ನು ಜರ್ಮನಿಯಿಂದ ಖರೀದಿಸಬೇಕಿತ್ತು. ವಿದೇಶಿ ಕಂಪನಿಗೆ ಡಾಲರ್ ರೂಪದಲ್ಲಿ ಪಾವತಿಸಬೇಕಿದ್ದರಿಂದ ನಗದು ಪರಿವರ್ತಿಸಿಕೊಳ್ಳಲು ನಿರ್ಧರಿಸಿದ್ದರು. ಈ ವಿಚಾರ ಆರೋಪಿಗಳಿಗೆ ಗೊತ್ತಾಗಿ, ಎಂ.ಎಸ್.ಪಾಳ್ಯಕ್ಕೆ ಹರ್ಷ ಅವರನ್ನು ಕರೆಸಿಕೊಂಡಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಹಣ ಎಣಿಸುತ್ತಿರುವಾಗ ಐದು ಮಂದಿ ಅಪರಿಚಿತರು ಏಕಾಏಕಿ ಮಳಿಗೆಯ ಒಳಗೆ ನುಗ್ಗಿದ್ದರು. ಆಗ ಅಪರಿಚಿತರು ಮಾರಕಾಸ್ತ್ರ ತೋರಿಸಿ ₹2 ಕೋಟಿ ನಗದು ಚೀಲಕ್ಕೆ ತುಂಬಿಕೊಂಡು ಮಳಿಗೆಯ ರೋಲಿಂಗ್ ಶೆಟರ್ ಹಾಕಿ ಪರಾರಿ ಆಗಿದ್ದರು’ ಎಂದು ಶ್ರೀಹರ್ಷ ದೂರಿನಲ್ಲಿ ಉಲ್ಲೇಖಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗದು ಹಣವನ್ನು ಡಾಲರ್ಗೆ ಪರಿವರ್ತಿಸಿಕೊಡುವುದಾಗಿ ನಂಬಿಸಿ ಉದ್ಯಮಿಯನ್ನು ಕರೆಸಿಕೊಂಡು ಮಾರಕಾಸ್ತ್ರ ತೋರಿಸಿ ಹಣ ಸುಲಿಗೆ ಮಾಡಿದ್ದ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>.<p>ಬೆಂಜಮಿನ್ ಹರ್ಷ, ರಕ್ಷಿತ್, ಪ್ರಕಾಶ್ ಹಾಗೂ ಭರತ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ₹ 2 ಕೋಟಿ ಸುಲಿಗೆ ನಡೆಸಲಾಗಿದೆ ಎಂದು ಆರೋಪಿಸಿ ಉದ್ಯಮಿ ವಿ.ಶ್ರೀಹರ್ಷ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಕೆಂಗೇರಿ ನಿವಾಸಿ ಶ್ರೀಹರ್ಷ ಅವರು ಆಯಿಲ್ ಉದ್ಯಮ ಘಟಕ ಸ್ಥಾಪಿಸುವ ನಿಟ್ಟಿನಲ್ಲಿ ಹಣ ಇಟ್ಟುಕೊಂಡಿದ್ದರು. ಘಟಕ ನಿರ್ಮಾಣಕ್ಕೆ ಅಗತ್ಯವಿರುವ ಯಂತ್ರೋಪಕರಣಗಳನ್ನು ಜರ್ಮನಿಯಿಂದ ಖರೀದಿಸಬೇಕಿತ್ತು. ವಿದೇಶಿ ಕಂಪನಿಗೆ ಡಾಲರ್ ರೂಪದಲ್ಲಿ ಪಾವತಿಸಬೇಕಿದ್ದರಿಂದ ನಗದು ಪರಿವರ್ತಿಸಿಕೊಳ್ಳಲು ನಿರ್ಧರಿಸಿದ್ದರು. ಈ ವಿಚಾರ ಆರೋಪಿಗಳಿಗೆ ಗೊತ್ತಾಗಿ, ಎಂ.ಎಸ್.ಪಾಳ್ಯಕ್ಕೆ ಹರ್ಷ ಅವರನ್ನು ಕರೆಸಿಕೊಂಡಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಹಣ ಎಣಿಸುತ್ತಿರುವಾಗ ಐದು ಮಂದಿ ಅಪರಿಚಿತರು ಏಕಾಏಕಿ ಮಳಿಗೆಯ ಒಳಗೆ ನುಗ್ಗಿದ್ದರು. ಆಗ ಅಪರಿಚಿತರು ಮಾರಕಾಸ್ತ್ರ ತೋರಿಸಿ ₹2 ಕೋಟಿ ನಗದು ಚೀಲಕ್ಕೆ ತುಂಬಿಕೊಂಡು ಮಳಿಗೆಯ ರೋಲಿಂಗ್ ಶೆಟರ್ ಹಾಕಿ ಪರಾರಿ ಆಗಿದ್ದರು’ ಎಂದು ಶ್ರೀಹರ್ಷ ದೂರಿನಲ್ಲಿ ಉಲ್ಲೇಖಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>