<p><strong>ಬೆಂಗಳೂರು: </strong>ಇಂದಿರಾನಗರದ 100 ಅಡಿ ರಸ್ತೆಯಲ್ಲಿರುವ ಕೈ ಗಡಿಯಾರ ಮಾರಾಟ ಮಳಿಗೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿ ಅಖ್ತರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಬಿಹಾರದ ಅಖ್ತರ್, ಅಪರಾಧ ಹಿನ್ನೆಲೆಯುಳ್ಳವ. ಬಿಹಾರದ ಸ್ನೇಹಿತರ ಗುಂಪು ಕಟ್ಟಿಕೊಂಡು ಮಳಿಗೆಯಲ್ಲಿ ಕಳ್ಳತನ ಮಾಡಿದ್ದ. ಆತನಿಂದ ₹ 2 ಕೋಟಿ ಮೌಲ್ಯದ ಕೈ ಗಡಿಯಾರಗಳನ್ನು ಜಪ್ತಿ ಮಾಡಲಾಗಿದೆ. ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮಂಗಮ್ಮನಪಾಳ್ಯದಲ್ಲಿ ನೆಲೆಸಿದ್ದ ಆರೋಪಿಗಳು, ಕೈ ಗಡಿಯಾರ ಮಾರಾಟ ಮಳಿಗೆ ಎದುರು ಹಲವು ಬಾರಿ ಸುತ್ತಾಡಿದ್ದರು. ಮಳಿಗೆ ತೆರೆಯುವ ಹಾಗೂ ಬಂದ್ ಮಾಡುವ ಸಮಯವನ್ನು ತಿಳಿದುಕೊಂಡಿದ್ದರು. ಗ್ರಾಹಕರ ಸೋಗಿನಲ್ಲಿ ಮಳಿಗೆಗೆ ಹೋಗಿ ಬಂದು, ಕಳ್ಳತನ ಹೇಗೆ ಮಾಡಬೇಕೆಂದು ಸಂಚು ರೂಪಿಸಿದ್ದರು.’</p>.<p>‘ಜ. 4ರಂದು ರಾತ್ರಿ ಮಳಿಗೆಯ ಬೀಗ ಮುರಿದು ಒಳನುಗ್ಗಿದ್ದ ಆರೋಪಿಗಳು, ₹ 2 ಕೋಟಿ ರೂ. ಮೌಲ್ಯದ ದುಬಾರಿ ಕೈ ಗಡಿಯಾರಗಳನ್ನು ಕದ್ದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಮಳಿಗೆ ಮಾಲೀಕರು ದೂರು ನೀಡಿದ್ದರು. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಇತರೆ ಪುರಾವೆ ಆಧರಿಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<p class="Subhead"><strong>ಹತ್ತು ವರ್ಷದ ಹಿಂದೆಯೂ ಕೃತ್ಯ:</strong> ‘ಬಂಧಿತ ಅಖ್ತರ್ ಹಾಗೂ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳು, 2012ರಲ್ಲೂ ನಗರಕ್ಕೆ ಬಂದಿದ್ದರು. ಮೊಬೈಲ್ ಹಾಗೂ ಕ್ಯಾಮೆರಾ ಮಾರಾಟ ಮಳಿಗೆಯಲ್ಲಿ ಕಳ್ಳತನ ಎಸಗಿ ಪರಾರಿಯಾಗಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿಗಳ ಕೃತ್ಯದ ಬಗ್ಗೆ 2012ರಲ್ಲಿ ಕೋರಮಂಗಲ, ಅಶೋಕನಗರ ಹಾಗೂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಆದರೆ, ಆರೋಪಿಗಳು 10 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಅವರ ಬಗ್ಗೆ ಯಾವುದೇ ಸುಳಿವು ಇರಲಿಲ್ಲ.’</p>.<p>‘ಜ. 4ರಂದು ಕೈ ಗಡಿಯಾರಗಳನ್ನು ಕಳ್ಳತನ ಮಾಡಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಹಳೇ ಪ್ರಕರಣಗಳ ಬಗ್ಗೆಯೂ ಆಯಾ ಠಾಣೆಗಳಿಂದ ಮಾಹಿತಿ ಪಡೆಯಲಾಗಿದೆ. ಉಳಿದ ಆರೋಪಿಗಳ ಪತ್ತೆಗೂ ವಿಶೇಷ ತಂಡ ರಚಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead"><strong>ನೇಪಾಳದಲ್ಲಿ ಮಾರಾಟ:</strong> ‘ನಗರದಲ್ಲಿ ಕದ್ದುಕೊಂಡು ಹೋಗಿದ್ದ ಮೊಬೈಲ್, ಕ್ಯಾಮೆರಾ ಹಾಗೂ ಕೈ ಗಡಿಯಾರಗಳನ್ನು ಆರೋಪಿಗಳು ನೇಪಾಳದಲ್ಲಿ ಮಾರುತ್ತಿದ್ದರು. ಬಂದ ಹಣವನ್ನು ಹಂಚಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಇಂದಿರಾನಗರದ 100 ಅಡಿ ರಸ್ತೆಯಲ್ಲಿರುವ ಕೈ ಗಡಿಯಾರ ಮಾರಾಟ ಮಳಿಗೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿ ಅಖ್ತರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಬಿಹಾರದ ಅಖ್ತರ್, ಅಪರಾಧ ಹಿನ್ನೆಲೆಯುಳ್ಳವ. ಬಿಹಾರದ ಸ್ನೇಹಿತರ ಗುಂಪು ಕಟ್ಟಿಕೊಂಡು ಮಳಿಗೆಯಲ್ಲಿ ಕಳ್ಳತನ ಮಾಡಿದ್ದ. ಆತನಿಂದ ₹ 2 ಕೋಟಿ ಮೌಲ್ಯದ ಕೈ ಗಡಿಯಾರಗಳನ್ನು ಜಪ್ತಿ ಮಾಡಲಾಗಿದೆ. ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮಂಗಮ್ಮನಪಾಳ್ಯದಲ್ಲಿ ನೆಲೆಸಿದ್ದ ಆರೋಪಿಗಳು, ಕೈ ಗಡಿಯಾರ ಮಾರಾಟ ಮಳಿಗೆ ಎದುರು ಹಲವು ಬಾರಿ ಸುತ್ತಾಡಿದ್ದರು. ಮಳಿಗೆ ತೆರೆಯುವ ಹಾಗೂ ಬಂದ್ ಮಾಡುವ ಸಮಯವನ್ನು ತಿಳಿದುಕೊಂಡಿದ್ದರು. ಗ್ರಾಹಕರ ಸೋಗಿನಲ್ಲಿ ಮಳಿಗೆಗೆ ಹೋಗಿ ಬಂದು, ಕಳ್ಳತನ ಹೇಗೆ ಮಾಡಬೇಕೆಂದು ಸಂಚು ರೂಪಿಸಿದ್ದರು.’</p>.<p>‘ಜ. 4ರಂದು ರಾತ್ರಿ ಮಳಿಗೆಯ ಬೀಗ ಮುರಿದು ಒಳನುಗ್ಗಿದ್ದ ಆರೋಪಿಗಳು, ₹ 2 ಕೋಟಿ ರೂ. ಮೌಲ್ಯದ ದುಬಾರಿ ಕೈ ಗಡಿಯಾರಗಳನ್ನು ಕದ್ದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಮಳಿಗೆ ಮಾಲೀಕರು ದೂರು ನೀಡಿದ್ದರು. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಇತರೆ ಪುರಾವೆ ಆಧರಿಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<p class="Subhead"><strong>ಹತ್ತು ವರ್ಷದ ಹಿಂದೆಯೂ ಕೃತ್ಯ:</strong> ‘ಬಂಧಿತ ಅಖ್ತರ್ ಹಾಗೂ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳು, 2012ರಲ್ಲೂ ನಗರಕ್ಕೆ ಬಂದಿದ್ದರು. ಮೊಬೈಲ್ ಹಾಗೂ ಕ್ಯಾಮೆರಾ ಮಾರಾಟ ಮಳಿಗೆಯಲ್ಲಿ ಕಳ್ಳತನ ಎಸಗಿ ಪರಾರಿಯಾಗಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿಗಳ ಕೃತ್ಯದ ಬಗ್ಗೆ 2012ರಲ್ಲಿ ಕೋರಮಂಗಲ, ಅಶೋಕನಗರ ಹಾಗೂ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಆದರೆ, ಆರೋಪಿಗಳು 10 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಅವರ ಬಗ್ಗೆ ಯಾವುದೇ ಸುಳಿವು ಇರಲಿಲ್ಲ.’</p>.<p>‘ಜ. 4ರಂದು ಕೈ ಗಡಿಯಾರಗಳನ್ನು ಕಳ್ಳತನ ಮಾಡಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಹಳೇ ಪ್ರಕರಣಗಳ ಬಗ್ಗೆಯೂ ಆಯಾ ಠಾಣೆಗಳಿಂದ ಮಾಹಿತಿ ಪಡೆಯಲಾಗಿದೆ. ಉಳಿದ ಆರೋಪಿಗಳ ಪತ್ತೆಗೂ ವಿಶೇಷ ತಂಡ ರಚಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead"><strong>ನೇಪಾಳದಲ್ಲಿ ಮಾರಾಟ:</strong> ‘ನಗರದಲ್ಲಿ ಕದ್ದುಕೊಂಡು ಹೋಗಿದ್ದ ಮೊಬೈಲ್, ಕ್ಯಾಮೆರಾ ಹಾಗೂ ಕೈ ಗಡಿಯಾರಗಳನ್ನು ಆರೋಪಿಗಳು ನೇಪಾಳದಲ್ಲಿ ಮಾರುತ್ತಿದ್ದರು. ಬಂದ ಹಣವನ್ನು ಹಂಚಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>