ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಅಪಘಾತ ಪ್ರಕರಣ: ಇಬ್ಬರ ಸಾವು

Last Updated 27 ಜನವರಿ 2023, 22:23 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯ ಹೊಸೂರು ಸರ್ವೀಸ್‌ ರಸ್ತೆಯ ಮುತ್ತೋಟ್ ಫಿನ್‌ಕಾರ್ಪ್‌ ಬಳಿ, ಪಾದಚಾರಿ ನಾಗರಾಜ್‌ ಬಸಪ್ಪ ಭೋವಿ (47) ಅವರಿಗೆ ಬೈಕ್‌ ಡಿಕ್ಕಿಯಾದ ಪರಿಣಾಮ ಅವರು ಮೃತಪಟ್ಟಿದ್ದಾರೆ.

ವೇಗವಾಗಿ ಬಂದ ಬೈಕ್‌ ನಾಗರಾಜ್‌ಗೆ ಡಿಕ್ಕಿಯಾದ ಪರಿಣಾಮ ಅವರು ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಸ್ಥಳೀಯರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಸದಾಶಿವನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯ ಎಚ್‌ಕ್ಯೂಟಿಸಿ ಬಸ್‌ ನಿಲ್ದಾಣದ ಬಳಿ ಸೀಸನ್ಸ್‌ ಹೋಟೆಲ್‌ ಕಡೆಗೆ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ 35 ವರ್ಷ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT