<p><strong>ಬೆಂಗಳೂರು</strong>: ಉಪ್ಪಾರಪೇಟೆ ಹಾಗೂ ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.</p><p>ಮೆಜೆಸ್ಟಿಕ್ ಬಳಿಯ ಅಮರ್ ಜಂಕ್ಷನ್ ಬಳಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತರಿಗೆ 40ರಿಂದ 45 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.</p><p>ಮಂಗಳವಾರ ರಾತ್ರಿ 11.30ರ ಸುಮಾರಿಗೆ ವ್ಯಕ್ತಿಯೊಬ್ಬರು ಸರ್ವೀಸ್ ರಸ್ತೆಯ ಬಳಿ ನಡೆದು ತೆರಳುತ್ತಿದ್ದರು. ಅದೇ ವೇಳೆಗೆ ವೇಗವಾಗಿ ಬಂದ ಯಶವಂತಪುರ ಡಿಪೊಗೆ ಸೇರಿದ ಬಸ್ ಡಿಕ್ಕಿಯಾಗಿದೆ. ತಲೆ, ದೇಹದ ಮೇಲೆ ಬಸ್ಸಿನ ಚಕ್ರಗಳು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ಮೃತ ವ್ಯಕ್ತಿ ಅಂಗವಿಕಲರಾಗಿದ್ದರು. ಮೃತದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ಅವರ ಕುಟುಂಬಸ್ಥರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.</p><p>ಬಸ್ ಚಾಲಕ ಗೋಪಾಲ್ನನ್ನು ಉಪ್ಪಾರಪೇಟೆ ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.</p><p>ಬಸ್ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.</p><p>ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p><strong>ಪ್ರಯಾಣಿಕರ ಆಕ್ರೋಶ</strong>: ‘ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದರು. ಆದರೆ, ಚಾಲಕ ವೇಗವಾಗಿ ಬಸ್ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ. ವ್ಯಕ್ತಿಗೆ ಬಸ್ ಡಿಕ್ಕಿಯಾದರೂ ಬಸ್ ನಿಲ್ಲಿಸಲಿಲ್ಲ. ಪ್ರಯಾಣಿಕರು ಕಿರುಚಾಡಿದ ಮೇಲೆ ಬಸ್ ನಿಲುಗಡೆ ಮಾಡಲಾಯಿತು’ ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದರು.</p>.<p><strong>ದ್ವಿಚಕ್ರ ವಾಹನ ಸವಾರ ಸಾವು</strong>: ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಉದಯ ನಗರದಲ್ಲಿ ನಡೆದ ದ್ವಿಚಕ್ರ ವಾಹನ ಹಾಗೂ ವಾಟರ್ ಟ್ಯಾಂಕರ್ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟಿದ್ದಾರೆ.</p><p>ಉದಯನಗರದ ನಿವಾಸಿ ಶೇಖರ್(55) ಮೃತಪಟ್ಟವರು.</p><p>ಶೇಖರ್ ಅವರು ಗಾರೆ ಕೆಲಸ ಮಾಡುತ್ತಿದ್ದರು. ಮಂಗಳವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಯತ್ತ ಹೊರಟಿದ್ದರು. ಐಟಿಪಿಎಲ್ ಮುಖ್ಯರಸ್ತೆಯ ಹೂಡಿ ಜಂಕ್ಷನ್ನ ಸುಜುಕಿ ಶೋರೂಂ ಬಳಿ ಅಪಘಾತ ನಡೆದಿದೆ.</p><p>‘ವೇಗವಾಗಿ ಬಂದ ವಾಟರ್ ಟ್ಯಾಂಕರ್ ವಾಹನವು ಸ್ಕೂಟರ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಶೇಖರ್ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉಪ್ಪಾರಪೇಟೆ ಹಾಗೂ ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.</p><p>ಮೆಜೆಸ್ಟಿಕ್ ಬಳಿಯ ಅಮರ್ ಜಂಕ್ಷನ್ ಬಳಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತರಿಗೆ 40ರಿಂದ 45 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.</p><p>ಮಂಗಳವಾರ ರಾತ್ರಿ 11.30ರ ಸುಮಾರಿಗೆ ವ್ಯಕ್ತಿಯೊಬ್ಬರು ಸರ್ವೀಸ್ ರಸ್ತೆಯ ಬಳಿ ನಡೆದು ತೆರಳುತ್ತಿದ್ದರು. ಅದೇ ವೇಳೆಗೆ ವೇಗವಾಗಿ ಬಂದ ಯಶವಂತಪುರ ಡಿಪೊಗೆ ಸೇರಿದ ಬಸ್ ಡಿಕ್ಕಿಯಾಗಿದೆ. ತಲೆ, ದೇಹದ ಮೇಲೆ ಬಸ್ಸಿನ ಚಕ್ರಗಳು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ಮೃತ ವ್ಯಕ್ತಿ ಅಂಗವಿಕಲರಾಗಿದ್ದರು. ಮೃತದೇಹವನ್ನು ಶವಾಗಾರದಲ್ಲಿ ಇಡಲಾಗಿದೆ. ಅವರ ಕುಟುಂಬಸ್ಥರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು.</p><p>ಬಸ್ ಚಾಲಕ ಗೋಪಾಲ್ನನ್ನು ಉಪ್ಪಾರಪೇಟೆ ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.</p><p>ಬಸ್ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.</p><p>ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p><strong>ಪ್ರಯಾಣಿಕರ ಆಕ್ರೋಶ</strong>: ‘ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದರು. ಆದರೆ, ಚಾಲಕ ವೇಗವಾಗಿ ಬಸ್ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ. ವ್ಯಕ್ತಿಗೆ ಬಸ್ ಡಿಕ್ಕಿಯಾದರೂ ಬಸ್ ನಿಲ್ಲಿಸಲಿಲ್ಲ. ಪ್ರಯಾಣಿಕರು ಕಿರುಚಾಡಿದ ಮೇಲೆ ಬಸ್ ನಿಲುಗಡೆ ಮಾಡಲಾಯಿತು’ ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದರು.</p>.<p><strong>ದ್ವಿಚಕ್ರ ವಾಹನ ಸವಾರ ಸಾವು</strong>: ಮಹದೇವಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಉದಯ ನಗರದಲ್ಲಿ ನಡೆದ ದ್ವಿಚಕ್ರ ವಾಹನ ಹಾಗೂ ವಾಟರ್ ಟ್ಯಾಂಕರ್ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟಿದ್ದಾರೆ.</p><p>ಉದಯನಗರದ ನಿವಾಸಿ ಶೇಖರ್(55) ಮೃತಪಟ್ಟವರು.</p><p>ಶೇಖರ್ ಅವರು ಗಾರೆ ಕೆಲಸ ಮಾಡುತ್ತಿದ್ದರು. ಮಂಗಳವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಯತ್ತ ಹೊರಟಿದ್ದರು. ಐಟಿಪಿಎಲ್ ಮುಖ್ಯರಸ್ತೆಯ ಹೂಡಿ ಜಂಕ್ಷನ್ನ ಸುಜುಕಿ ಶೋರೂಂ ಬಳಿ ಅಪಘಾತ ನಡೆದಿದೆ.</p><p>‘ವೇಗವಾಗಿ ಬಂದ ವಾಟರ್ ಟ್ಯಾಂಕರ್ ವಾಹನವು ಸ್ಕೂಟರ್ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಶೇಖರ್ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>