<p><strong>ಬೆಂಗಳೂರು</strong>: ನಗರದಲ್ಲಿ ಶಾಲೆ ಬಿಟ್ಟ ಮಕ್ಕಳ ಬಗ್ಗೆ ನಡೆಸುತ್ತಿರುವ ಸಮೀಕ್ಷೆ ಪೂರ್ಣಗೊಳಿಸಲು ಬಿಬಿಎಂಪಿಗೆ ಹೈಕೋರ್ಟ್ ಎರಡು ತಿಂಗಳ ಕಾಲಾವಕಾಶ ನೀಡಿದೆ.</p>.<p>2013ರಲ್ಲಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆ ಮುಂದೂಡಿತು.</p>.<p>‘ಶಾಲೆ ಬಿಟ್ಟ ಮಕ್ಕಳ ನಿಖರ ಮಾಹಿತಿ ಕಲೆ ಹಾಕಲು ಮನೆ–ಮನೆ ಸಮೀಕ್ಷೆ ನಡೆಸಲಾಗುತ್ತಿದೆ. 2021ರ ಸೆಪ್ಟೆಂಬರ್ ವೇಳೆಗೆ ಶೇ 12.14ರಷ್ಟು ಸಮೀಕ್ಷೆ ನಡೆದಿತ್ತು. ಈಗ ಶೇ 51ರಷ್ಟು ಪೂರ್ಣಗೊಂಡಿದೆ’ ಎಂದು ಬಿಬಿಎಂಪಿ ಪರ ವಕೀಲರು ಮಾಹಿತಿ ನೀಡಿದರು.</p>.<p>‘ಮಾಹಿತಿ ನೀಡಲು ಹಿಂಜರಿಯುವ ಜನರಿಗೆ ತಿಳಿವಳಿಕೆ ನೀಡಿ ಸಮೀಕ್ಷೆ ನಡೆಸಲು ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಹೀಗಾಗಿ, ಸಮೀಕ್ಷೆ ಪೂರ್ಣಗೊಳಿಸಲು ಮೂರು ತಿಂಗಳ ಕಾಲಾವಕಾಶ ಬೇಕು’ ಎಂದು ಮನವಿ ಮಾಡಿದರು. ಆದರೆ, ಪೀಠ ಎರಡು ತಿಂಗಳ ಕಾಲಾವಕಾಶ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಶಾಲೆ ಬಿಟ್ಟ ಮಕ್ಕಳ ಬಗ್ಗೆ ನಡೆಸುತ್ತಿರುವ ಸಮೀಕ್ಷೆ ಪೂರ್ಣಗೊಳಿಸಲು ಬಿಬಿಎಂಪಿಗೆ ಹೈಕೋರ್ಟ್ ಎರಡು ತಿಂಗಳ ಕಾಲಾವಕಾಶ ನೀಡಿದೆ.</p>.<p>2013ರಲ್ಲಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆ ಮುಂದೂಡಿತು.</p>.<p>‘ಶಾಲೆ ಬಿಟ್ಟ ಮಕ್ಕಳ ನಿಖರ ಮಾಹಿತಿ ಕಲೆ ಹಾಕಲು ಮನೆ–ಮನೆ ಸಮೀಕ್ಷೆ ನಡೆಸಲಾಗುತ್ತಿದೆ. 2021ರ ಸೆಪ್ಟೆಂಬರ್ ವೇಳೆಗೆ ಶೇ 12.14ರಷ್ಟು ಸಮೀಕ್ಷೆ ನಡೆದಿತ್ತು. ಈಗ ಶೇ 51ರಷ್ಟು ಪೂರ್ಣಗೊಂಡಿದೆ’ ಎಂದು ಬಿಬಿಎಂಪಿ ಪರ ವಕೀಲರು ಮಾಹಿತಿ ನೀಡಿದರು.</p>.<p>‘ಮಾಹಿತಿ ನೀಡಲು ಹಿಂಜರಿಯುವ ಜನರಿಗೆ ತಿಳಿವಳಿಕೆ ನೀಡಿ ಸಮೀಕ್ಷೆ ನಡೆಸಲು ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಹೀಗಾಗಿ, ಸಮೀಕ್ಷೆ ಪೂರ್ಣಗೊಳಿಸಲು ಮೂರು ತಿಂಗಳ ಕಾಲಾವಕಾಶ ಬೇಕು’ ಎಂದು ಮನವಿ ಮಾಡಿದರು. ಆದರೆ, ಪೀಠ ಎರಡು ತಿಂಗಳ ಕಾಲಾವಕಾಶ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>