ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಧಾನಿಯಲ್ಲಿ ರೌಡಿಗಳಿಬ್ಬರ ಬರ್ಬರ ಹತ್ಯೆ

Last Updated 22 ನವೆಂಬರ್ 2018, 5:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಮಚ್ಚು ಲಾಂಗುಗಳು ಝಳಪಿಸಿದ್ದು, ಕೋಣನಕುಂಟೆಯ ವೀವರ್ಸ್​​ ಕಾಲೊನಿಯಲ್ಲಿ ಬುಧವಾರ ರಾತ್ರಿ ಇಬ್ಬರು ರೌಡಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ತಮಿಳುನಾಡಿನ ಮುರುಗನ್ ಹಾಗೂ ಪಳನಿ ಕೊಲೆಯಾದವರು. ವೀವರ್ಸ್ ಕಾಲೊನಿಯಲ್ಲಿ ನೆಲೆಸಿದ್ದ ಇವರಿಬ್ಬರು, ರಾತ್ರಿ 11 ಗಂಟೆ ಸುಮಾರಿಗೆ ಪಾನಮತ್ತರಾಗಿ ಮನೆಗೆ ನಡೆದು ಹೋಗುತ್ತಿದ್ದರು.

ಈ ವೇಳೆ ಎರಡು ಆಟೊಗಳಲ್ಲಿ ಬಂದು ಅವರನ್ನು ಅಡ್ಡಗಟ್ಟಿದ ಎಂಟು ಮಂದಿ ದುಷ್ಕರ್ಮಿಗಳು, ಮಚ್ಚು ಲಾಂಗುಗಳಿಂದ ಕೊಚ್ಚಿ ಹಾಕಿದ್ದಾರೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಮಂಜುನಾಥ ಅಲಿಯಾಸ್ ಬಿಟಿಎಸ್ ಮಂಜನ ಗ್ಯಾಂಗ್ ಈ ಕೃತ್ಯ ಎಸಗಿದೆ ಎಂದು ಹೇಳಲಾಗುತ್ತಿದ್ದು, ಕೋಣನಕುಂಟೆ ಪೊಲೀಸರು ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕಳೆದ ತಿಂಗಳು ಪಳನಿ ಮಗಳ ಹುಟ್ಟುಹಬ್ಬವಿತ್ತು. ಮನೆಯಲ್ಲೇ ಸಂಭ್ರಮದಿಂದ ಹುಟ್ಟುಹಬ್ಬ ಆಚರಿಸಿದ್ದ ಪಳನಿ, ಸುತ್ತಮುತ್ತಲ ಪುಡಿ ರೌಡಿಗಳನ್ನೆಲ್ಲ ಆಹ್ವಾನಿಸಿದ್ದ. ಆದರೆ, ಬಿಟಿಎಸ್ ಮಂಜನನ್ನು ಕರೆದಿರಲಿಲ್ಲ. ಈ ವಿಚಾರವಾಗಿಯೂ ಮಂಜ ಪಳನಿಯ ಮೇಲೆ ಸಿಟ್ಟಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT