<p><strong>ಬೆಂಗಳೂರು</strong>: ಒಡಿಶಾದಿಂದ ತೆಲಂಗಾಣ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 2 ಟನ್ (2,000 ಕೆ.ಜಿ) ಗಾಂಜಾವನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್ಸಿಬಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.</p>.<p>‘ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಬೆಂಗಳೂರು ಹಾಗೂ ಹೈದರಾಬಾದ್ ಉಪವಲಯಗಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಎನ್ಸಿಬಿಯಿಂದ 2 ಟನ್ ಗಾಂಜಾ ಜಪ್ತಿ ಮಾಡಿದ ಪ್ರಕರಣ ಇದೇ ಮೊದಲು’ ಎಂದು ಎನ್ಸಿಬಿ ವಲಯ ನಿರ್ದೇಶಕ ಅಮಿತ್ ಘಾವಟೆ ’ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಒಡಿಶಾದಲ್ಲಿ ಖರೀದಿಸಿದ್ದ ಗಾಂಜಾವನ್ನು 1,080 ಪೊಟ್ಟಣಗಳಲ್ಲಿ ತುಂಬಲಾಗಿತ್ತು. ಅದನ್ನೇ ಲಾರಿಯಲ್ಲಿ ತುಂಬಿ, ಅದರ ಮೇಲೆ ತಾಡಪತ್ರಿ ಮುಚ್ಚಿ ಸಾಗಣೆ ಮಾಡಲಾಗುತ್ತಿತ್ತು. ಹೈದರಾಬಾದ್ನ ಟೋಲ್ಗೇಟೊಂದರ ಬಳಿ ಲಾರಿ ತಡೆದು ಪರಿಶೀಲನೆ ನಡೆಸಿದಾಗ ಕೃತ್ಯ ಬಯಲಾಯಿತು’ ಎಂದೂ ಹೇಳಿದರು.</p>.<p>‘ಗಾಂಜಾ ಸಾಗಿಸುತ್ತಿದ್ದ ಆರೋಪದಡಿ ಚಾಲಕ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.</p>.<p>‘ಮುಂಬೈ ಹಾಗೂ ಪುಣೆಯಲ್ಲಿ ಮಾರಾಟ ಮಾಡಲು ಈ ಗಾಂಜಾ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಇದೆ. ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಒಡಿಶಾದಿಂದ ತೆಲಂಗಾಣ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 2 ಟನ್ (2,000 ಕೆ.ಜಿ) ಗಾಂಜಾವನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್ಸಿಬಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.</p>.<p>‘ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಬೆಂಗಳೂರು ಹಾಗೂ ಹೈದರಾಬಾದ್ ಉಪವಲಯಗಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಎನ್ಸಿಬಿಯಿಂದ 2 ಟನ್ ಗಾಂಜಾ ಜಪ್ತಿ ಮಾಡಿದ ಪ್ರಕರಣ ಇದೇ ಮೊದಲು’ ಎಂದು ಎನ್ಸಿಬಿ ವಲಯ ನಿರ್ದೇಶಕ ಅಮಿತ್ ಘಾವಟೆ ’ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಒಡಿಶಾದಲ್ಲಿ ಖರೀದಿಸಿದ್ದ ಗಾಂಜಾವನ್ನು 1,080 ಪೊಟ್ಟಣಗಳಲ್ಲಿ ತುಂಬಲಾಗಿತ್ತು. ಅದನ್ನೇ ಲಾರಿಯಲ್ಲಿ ತುಂಬಿ, ಅದರ ಮೇಲೆ ತಾಡಪತ್ರಿ ಮುಚ್ಚಿ ಸಾಗಣೆ ಮಾಡಲಾಗುತ್ತಿತ್ತು. ಹೈದರಾಬಾದ್ನ ಟೋಲ್ಗೇಟೊಂದರ ಬಳಿ ಲಾರಿ ತಡೆದು ಪರಿಶೀಲನೆ ನಡೆಸಿದಾಗ ಕೃತ್ಯ ಬಯಲಾಯಿತು’ ಎಂದೂ ಹೇಳಿದರು.</p>.<p>‘ಗಾಂಜಾ ಸಾಗಿಸುತ್ತಿದ್ದ ಆರೋಪದಡಿ ಚಾಲಕ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.</p>.<p>‘ಮುಂಬೈ ಹಾಗೂ ಪುಣೆಯಲ್ಲಿ ಮಾರಾಟ ಮಾಡಲು ಈ ಗಾಂಜಾ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಇದೆ. ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>