<p><strong>ಬೆಂಗಳೂರು</strong>: ಎರಡು ವರ್ಷದ ಮಗುವಿನ ಮೇಲೆ ನಾಯಿ ದಾಳಿ ನಡೆಸಿದ್ದು, ನಾಯಿಯ ಮಾಲೀಕರ ಮೇಲೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಡಿಸೆಂಬರ್ 23ರಂದು ಬಾಣಸವಾಡಿಯ ವೆಂಕಟಸ್ವಾಮಿ ಲೇಔಟ್ನಲ್ಲಿ ಮಗುವಿನ ಮೇಲೆ ಪಿಟ್ಬುಲ್ ನಾಯಿ ದಾಳಿ ನಡೆಸಿದೆ ಎಂಬ ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ.</p>.<p>‘ನಾಯಿ ದಾಳಿಯಿಂದ ಎರಡು ವರ್ಷದ ಹೆಣ್ಣು ಮಗುವಿನ ಭುಜಕ್ಕೆ ಗಂಭೀರವಾದ ಗಾಯಗಳಾಗಿವೆ’ ಎಂದು ತಂದೆ ನಬ್ರಾಜ್ ದಮಾಲ್ ಆರೋಪಿಸಿದ್ದಾರೆ.</p>.<p>‘ಮಗುವಿನ ಪೋಷಕರು ನೇಪಾಳದವರಾಗಿದ್ದು, ಬಾಣಸವಾಡಿಯ ವೆಂಕಟಸ್ವಾಮಿ ಲೇಔಟ್ನಲ್ಲಿ ವಾಸವಿದ್ದಾರೆ. ಅವರ ಮನೆಯ ಪಕ್ಕದಲ್ಲೇ ವಾಸವಿರುವವರು ಪಿಟ್ಬುಲ್ ನಾಯಿ ಸಾಕಿದ್ದಾರೆ. ಅಂದು ಸಂಜೆ 5.30ರ ವೇಳೆ ಮಗು ಎತ್ತಿಕೊಂಡು ತಾಯಿ ನಿಂತಿದ್ದರು. ಆಗ ನಾಯಿ ಏಕಾಏಕಿ ದಾಳಿ ನಡೆಸಿದೆ’ ಎಂದು ಆರೋಪಿಸಲಾಗಿದೆ.</p>.<p>‘ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆಗೆ ₹ 80 ಸಾವಿರ ವೆಚ್ಚವಾಗಿದೆ. ಮಾಲೀಕನ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ’ ಎಂದು ದೂರಿನಲ್ಲಿ ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎರಡು ವರ್ಷದ ಮಗುವಿನ ಮೇಲೆ ನಾಯಿ ದಾಳಿ ನಡೆಸಿದ್ದು, ನಾಯಿಯ ಮಾಲೀಕರ ಮೇಲೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಡಿಸೆಂಬರ್ 23ರಂದು ಬಾಣಸವಾಡಿಯ ವೆಂಕಟಸ್ವಾಮಿ ಲೇಔಟ್ನಲ್ಲಿ ಮಗುವಿನ ಮೇಲೆ ಪಿಟ್ಬುಲ್ ನಾಯಿ ದಾಳಿ ನಡೆಸಿದೆ ಎಂಬ ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ.</p>.<p>‘ನಾಯಿ ದಾಳಿಯಿಂದ ಎರಡು ವರ್ಷದ ಹೆಣ್ಣು ಮಗುವಿನ ಭುಜಕ್ಕೆ ಗಂಭೀರವಾದ ಗಾಯಗಳಾಗಿವೆ’ ಎಂದು ತಂದೆ ನಬ್ರಾಜ್ ದಮಾಲ್ ಆರೋಪಿಸಿದ್ದಾರೆ.</p>.<p>‘ಮಗುವಿನ ಪೋಷಕರು ನೇಪಾಳದವರಾಗಿದ್ದು, ಬಾಣಸವಾಡಿಯ ವೆಂಕಟಸ್ವಾಮಿ ಲೇಔಟ್ನಲ್ಲಿ ವಾಸವಿದ್ದಾರೆ. ಅವರ ಮನೆಯ ಪಕ್ಕದಲ್ಲೇ ವಾಸವಿರುವವರು ಪಿಟ್ಬುಲ್ ನಾಯಿ ಸಾಕಿದ್ದಾರೆ. ಅಂದು ಸಂಜೆ 5.30ರ ವೇಳೆ ಮಗು ಎತ್ತಿಕೊಂಡು ತಾಯಿ ನಿಂತಿದ್ದರು. ಆಗ ನಾಯಿ ಏಕಾಏಕಿ ದಾಳಿ ನಡೆಸಿದೆ’ ಎಂದು ಆರೋಪಿಸಲಾಗಿದೆ.</p>.<p>‘ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆಗೆ ₹ 80 ಸಾವಿರ ವೆಚ್ಚವಾಗಿದೆ. ಮಾಲೀಕನ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ’ ಎಂದು ದೂರಿನಲ್ಲಿ ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>