‘100ಕ್ಕೂ ಹೆಚ್ಚು ಕಾರ್ಮಿಕರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಹೆಸರಿನಲ್ಲಿ ಪಿಎಫ್ ಹಣ ಸಹ ಕಡಿತ ಮಾಡಲಾಗಿತ್ತು. ಆದರೆ, ಅದನ್ನು ಪಿಎಫ್ ಕಚೇರಿಗೆ ಪಾವತಿಸಿರಲಿಲ್ಲ. ಈ ಬಗ್ಗೆ ಕಾರ್ಮಿಕರೊಬ್ಬರು ನೀಡಿದ್ದ ದೂರಿನನ್ವಯ ತನಿಖೆ ನಡೆಸಲಾಯಿತು. ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ನಾಸೀರ್ ಅಕ್ರಮ ಎಸಗಿದ್ದು ಗೊತ್ತಾಯಿತು’ ಎಂದು ಜಯಶಂಕರ್ ದೂರಿನಲ್ಲಿ ಹೇಳಿರುವುದಾಗಿ ವಿವರಿಸಿದರು.