ಬೆಂಗಳೂರಿನಲ್ಲಿ 100 ವರ್ಷಗಳಿಂದ ಕುದುರೆ ರೇಸ್ ನಡೆಯುತ್ತಿದೆ. ರಾಜ್ಯ ಸರ್ಕಾರವೂ ಇದರಿಂದ ಆದಾಯ ಪಡೆಯುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವನ್ನೂ ಪ್ರತಿವಾದಿಯನ್ನಾಗಿ ಮಾಡಬೇಕು ಎಂದು ಬಿಟಿಸಿ ಮಧ್ಯಂತರ ಅರ್ಜಿಯೊಂದನ್ನು ಸಲ್ಲಿಸಿತು. ಈ ಕೋರಿಕೆಯನ್ನು ಮಾನ್ಯ ಮಾಡಲು ನಿರಾಕರಿಸಿದ ನ್ಯಾಯಪೀಠ, ‘ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಅರ್ಜಿದಾರರು ಇಂತಹ ಕೋರಿಕೆ ಸಲ್ಲಿಸಬಹುದು. ಆದರೆ, ಪ್ರತಿವಾದಿ ಸಲ್ಲಿಸಲು ಅವಕಾಶವಿಲ್ಲ’ ಎಂದು ತಿಳಿಸಿತು.