‘ನಗರದ ಪ್ರಮುಖ ಬಸ್ ಹಾಗೂ ರೈಲು ನಿಲ್ದಾಣ ಸೇರಿದಂತೆ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ದಿನದ 24 ಗಂಟೆಗಳ ಕಾಲ ಹೋಟೆಲ್ ತೆರೆಯಲು ಅನುಮತಿ ನೀಡಬಹುದಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ನಗರದ ಎಲ್ಲೆಡೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಲು ಕಷ್ಟವಾಗಲಿದೆ. ಜನಸಂದಣಿಯಿಲ್ಲದ ಪ್ರದೇಶಗಳಲ್ಲಿ ಹೋಟೆಲ್ ವಹಿವಾಟಿಗೆ ಅವಕಾಶ ಕೊಟ್ಟರೆ, ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ. ಸಿಬ್ಬಂದಿ ಇಲ್ಲದಿರುವುದು ಎಲ್ಲೆಡೆ ಅನುಮತಿ ನಿರಾಕರಿಸಲು ಮತ್ತೊಂದು ಕಾರಣ. ಹೀಗಾಗಿ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಹೋಟೆಲ್ ನಡೆಸಲು ಅನುಮತಿ ನೀಡಬಹುದಾಗಿದೆ’ ಎಂದು ಸರ್ಕಾರಕ್ಕೆ ನಗರ ಪೊಲೀಸರು ವರದಿ ಸಲ್ಲಿಸಿದ್ದಾರೆ.