‘ಸರ್ಕಾರ ಜಮೀನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ಕಂಪನಿಯು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ನಂತರ ವಾರಸುದಾರರಿಗೆ ಜಮೀನು ಮಂಜೂರಾಗಿತ್ತು. ಇದನ್ನು ಕಂದಾಯ ಇಲಾಖೆ ಪ್ರಾಧಿಕಾರ ಹೈಕೋರ್ಟ್ನಲ್ಲಿ ಪ್ರಶ್ನಿಸಿ, ದ್ವಿಸದಸ್ಯ ಪೀಠದ ಮುಂದೆ ವಾದ ಮಂಡಿಸಿತ್ತು. ಅಂತಿಮವಾಗಿ ಸರ್ಕಾರದ ಪರವಾಗಿ ಆದೇಶ ಬಂದಿದ್ದರಿಂದ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ’ ಎಂದು ಅವರು ಹೇಳಿದರು.