ನಗರದಲ್ಲಿ ಕಾಡಾನೆಗಳು ಜನವಸತಿ ಪ್ರದೇಶಕ್ಕೆ ಪ್ರವೇಶಿಸುವುದನ್ನು ತಪ್ಪಿಸಲು ಆನೆ ಕಾರ್ಯಪಡೆ ರಚಿಸಲಾಗಿದೆ. ಕಗ್ಗಲೀಪುರ, ಆನೇಕಲ್, ಯಲಹಂಕ, ಹೊಸಕೋಟೆ, ಕೆ.ಆರ್. ಪುರ ಮತ್ತಿತರ ಪ್ರದೇಶಗಳಲ್ಲಿ ಚಿರತೆಗಳು ಜನವಸತಿ ಪ್ರದೇಶಕ್ಕೆ ಪ್ರವೇಶಿಸಿ, ಸಮಸ್ಯೆ ಉಂಟಾಗುವುದನ್ನು ತಪ್ಪಿಸಲು ಚಿರತೆ ಕಾರ್ಯಪಡೆಯನ್ನೂ ರಚಿಸಲಾಗಿದೆ. ಈ ಕಾರ್ಯಪಡೆಗೆ 59 ಸಿಬ್ಬಂದಿ ಒದಗಿಸಲಾಗಿದೆ ಎಂದು ತಿಳಿಸಿದರು.