ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊಗೆ ಮತ್ತೆ 265 ಮರ ಬಲಿ?

Last Updated 6 ನವೆಂಬರ್ 2019, 21:29 IST
ಅಕ್ಷರ ಗಾತ್ರ

ಬೆಂಗಳೂರು: ನಮ್ಮ ಮೆಟ್ರೊ ಯೋಜನೆಯ ಎರಡನೇ ಹಂತದ ಕಾಮಗಾರಿಗೆ ಮತ್ತೆ 265 ಮರಗಳು ಬಲಿಯಾಗಲಿವೆ.

ಪಾಟರಿ ಟೌನ್‌ನಿಂದ ಡೇರಿ ವೃತ್ತದವರೆಗಿನ ಸುರಂಗ ಮಾರ್ಗದ ನಿಲ್ದಾಣಗಳು ನಿರ್ಮಾಣವಾಗುವ ಕಡೆ ಒಟ್ಟು 324 ಮರಗಳನ್ನು ತೆರವು ಮಾಡಬೇಕಾಗುತ್ತದೆ. ಈ ಪೈಕಿ, 57 ಮರಗಳನ್ನು ಸ್ಥಳಾಂತರ ಮಾಡಲು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಸಿದ್ಧತೆ ನಡೆಸಿದೆ. ಇನ್ನುಳಿದ 265 ಮರಗಳನ್ನು ಕಳೆದುಕೊಳ್ಳುವುದು ಅನಿವಾರ್ಯವಾಗಲಿದೆ.

ಎರಡನೇ ಹಂತದ ಯೋಜನೆಯ ಕಾಮಗಾರಿಗಾಗಿ ಒಟ್ಟು 684 ಮರಗಳನ್ನು ತೆರವುಗೊಳಿಸಬೇಕಾದ ಅನಿವಾರ್ಯ ಎದುರಾಗಿದೆ. ಈ ಪೈಕಿ 222 ಮರಗಳ ತೆರವಿಗೆ ಅನುಮತಿ ಅಗತ್ಯವಿಲ್ಲ. 577 ಮರಗಳನ್ನು ಸ್ಥಳಾಂತರ ಮಾಡಲಾಗಿದೆ. 107 ಮರಗಳನ್ನು ಕಡಿಯಲಾಗಿದೆ. ಇದಕ್ಕೆ ಪ್ರತಿಯಾಗಿ 8000 ಸಸಿಗಳನ್ನು ನೆಡಲಾಗಿದೆ. ಇವುಗಳನ್ನು ಬೆಳೆಸಲು ಬಿಬಿಎಂಪಿಯಲ್ಲಿ ₹ 63.37 ಲಕ್ಷ ಠೇವಣಿ ಇಡಲಾಗಿದೆ ಎಂದು ನಿಗಮ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT