<p><strong>ಬೆಂಗಳೂರು:</strong> ಕೊರೊನಾದಿಂದ ಗುಣಮುಖರಾದವರಲ್ಲಿ ಮತ್ತೊಮ್ಮೆ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದರು.</p>.<p>ಕೋವಿಡ್-19 ತಪಾಸಣೆಯ ಕುರಿತು ಹಿರಿಯ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಅವರು, ಫೋರ್ಟಿಸ್ ಆಸ್ಪತ್ರೆಯಲ್ಲಿ ಕೊರೊನಾದಿಂದ ಗುಣಮುಖರಾಗಿದ್ದ 27 ವರ್ಷದ ಮಹಿಳೆಗೆ ಮತ್ತೊಮ್ಮೆ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿದರು.</p>.<p>‘ಇತರ ರಾಷ್ಟ್ರಗಳಲ್ಲೂ ಈ ರೀತಿಯ ಪ್ರಕರಣಗಳು ಕಂಡುಬಂದಿವೆ. ಇದಕ್ಕೆ ಒಂದೊಂದು ದೇಶದಲ್ಲೂ ಒಂದೊಂದು ರೀತಿ ಕಾರಣ ಕೇಳಿಬಂದಿವೆ. ನಮ್ಮಲ್ಲೂ ಇಂಥ ಪ್ರಕರಣ ಕಾಣಿಸಿಕೊಂಡಿರುವುದು ಆತಂಕದ ವಿಷಯ. ಇದನ್ನು ಸೂಕ್ಷ್ಮರೀತಿಯಲ್ಲಿ ನಿರ್ವಹಿಸುವ ಮೂಲಕ ಜನರಲ್ಲಿ ಮತ್ತೊಮ್ಮೆ ಕೊರೊನಾ ಬಾಧಿಸುತ್ತದೆ ಎಂಬ ಆತಂಕ ದೂರ ಮಾಡಬೇಕು’ ಎಂದರು.</p>.<p>‘ಕೋವಿಡ್ನಿಂದ ಗುಣಮುಖರಾದವರ ದೇಹದಲ್ಲಿ ಬಿಳಿರಕ್ತ ಕಣಗಳ ಮರು ಉತ್ಪಾದನೆಗೆ ಕನಿಷ್ಠ 15 ದಿನಗಳ ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಕೆಲವರಿಗೆ ಸೋಂಕು ಮತ್ತೊಮ್ಮೆ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಆದರೆ, ಇದೇ ಕಾರಣ ಎಂದು ಸ್ಪಷ್ಟವಾಗಿ ಹೇಳಲಾಗದು’ ಎಂದು ಸಭೆಯಲ್ಲಿದ್ದ ತಜ್ಞರು ತಿಳಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಮತ್ತೊಮ್ಮೆ ಕೊರೊನ ಸೋಂಕು ಕಾಣಿಸಿಕೊಳ್ಳಲು ಕಾರಣ ಏನು ಎಂಬ ಬಗ್ಗೆ ನಿಖರತೆ ಬೇಕು. ಜೊತೆಗೆ ಇತರೆ ರಾಜ್ಯಗಳಲ್ಲಿ ಇಂಥ ಪ್ರಕರಣಗಳಲ್ಲಿ ಅಳವಡಿಸಿಕೊಂಡಿರುವ ಚಿಕಿತ್ಸಾ ಕ್ರಮದ ಬಗ್ಗೆ ಶೀಘ್ರವೇ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.</p>.<p>ಕೋವಿಡ್ನಿಂದ ಗುಣಮುಖರಾದವರ ಮೇಲೆ ಯಾವ ರೀತಿ ನಿಗಾ ವಹಿಸಲಾಗುತ್ತಿದೆ. ಅವರು ಅನುಸರಿಸಬೇಕಾದ ಎಚ್ಚರಿಕೆ ಹಾಗೂ ಇತರೆ ಕ್ರಮಗಳ ಬಗ್ಗೆ ಯಾವ ರೀತಿ ಅರಿವು ಮೂಡಿಸಲಾಗಿದೆ ಎಂಬ ವಿಷಯಗಳ ಬಗ್ಗೆಯೂ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು.</p>.<p><strong>ಬೂತ್ ಮಟ್ಟದ ಸಮಿತಿಗೆ ಜವಾಬ್ದಾರಿ: </strong>‘ಕೋವಿಡ್ ನಿಯಂತ್ರಣ ಬೂತ್ಮಟ್ಟದಿಂದ ಮಾತ್ರ ಸಾಧ್ಯ ಎಂಬುದನ್ನು ಮೊದಲಿನಿಂದ ಪ್ರತಿಪಾದಿಸಿದ್ದೇವೆ. ಬೂತ್ ಮಟ್ಟದಲ್ಲಿ ಸಮಿತಿ ರಚಿಸಿ, ಜಾಗೃತಿ ಮೂಡಿಸುವುದು ಹಾಗೂ ಕೊರೊನಾ ಪರೀಕ್ಷೆ ನಡೆಸುವುದರಿಂದ ಸುಲಭವಾಗಿ ಸೋಂಕು ಹರಡುವಿಕೆ ನಿಯಂತ್ರಣ ಸಾಧ್ಯ. ಈ ಜವಾಬ್ದಾರಿಯನ್ನು ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ವಹಿಸಿದರೆ ಇದರ ನಿರ್ವಹಣೆ ಸುಲಭ’ ಎಂದೂ ಸಚಿವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾದಿಂದ ಗುಣಮುಖರಾದವರಲ್ಲಿ ಮತ್ತೊಮ್ಮೆ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದರು.</p>.<p>ಕೋವಿಡ್-19 ತಪಾಸಣೆಯ ಕುರಿತು ಹಿರಿಯ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಅವರು, ಫೋರ್ಟಿಸ್ ಆಸ್ಪತ್ರೆಯಲ್ಲಿ ಕೊರೊನಾದಿಂದ ಗುಣಮುಖರಾಗಿದ್ದ 27 ವರ್ಷದ ಮಹಿಳೆಗೆ ಮತ್ತೊಮ್ಮೆ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಪ್ರಸ್ತಾಪಿಸಿದರು.</p>.<p>‘ಇತರ ರಾಷ್ಟ್ರಗಳಲ್ಲೂ ಈ ರೀತಿಯ ಪ್ರಕರಣಗಳು ಕಂಡುಬಂದಿವೆ. ಇದಕ್ಕೆ ಒಂದೊಂದು ದೇಶದಲ್ಲೂ ಒಂದೊಂದು ರೀತಿ ಕಾರಣ ಕೇಳಿಬಂದಿವೆ. ನಮ್ಮಲ್ಲೂ ಇಂಥ ಪ್ರಕರಣ ಕಾಣಿಸಿಕೊಂಡಿರುವುದು ಆತಂಕದ ವಿಷಯ. ಇದನ್ನು ಸೂಕ್ಷ್ಮರೀತಿಯಲ್ಲಿ ನಿರ್ವಹಿಸುವ ಮೂಲಕ ಜನರಲ್ಲಿ ಮತ್ತೊಮ್ಮೆ ಕೊರೊನಾ ಬಾಧಿಸುತ್ತದೆ ಎಂಬ ಆತಂಕ ದೂರ ಮಾಡಬೇಕು’ ಎಂದರು.</p>.<p>‘ಕೋವಿಡ್ನಿಂದ ಗುಣಮುಖರಾದವರ ದೇಹದಲ್ಲಿ ಬಿಳಿರಕ್ತ ಕಣಗಳ ಮರು ಉತ್ಪಾದನೆಗೆ ಕನಿಷ್ಠ 15 ದಿನಗಳ ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಕೆಲವರಿಗೆ ಸೋಂಕು ಮತ್ತೊಮ್ಮೆ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಆದರೆ, ಇದೇ ಕಾರಣ ಎಂದು ಸ್ಪಷ್ಟವಾಗಿ ಹೇಳಲಾಗದು’ ಎಂದು ಸಭೆಯಲ್ಲಿದ್ದ ತಜ್ಞರು ತಿಳಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಮತ್ತೊಮ್ಮೆ ಕೊರೊನ ಸೋಂಕು ಕಾಣಿಸಿಕೊಳ್ಳಲು ಕಾರಣ ಏನು ಎಂಬ ಬಗ್ಗೆ ನಿಖರತೆ ಬೇಕು. ಜೊತೆಗೆ ಇತರೆ ರಾಜ್ಯಗಳಲ್ಲಿ ಇಂಥ ಪ್ರಕರಣಗಳಲ್ಲಿ ಅಳವಡಿಸಿಕೊಂಡಿರುವ ಚಿಕಿತ್ಸಾ ಕ್ರಮದ ಬಗ್ಗೆ ಶೀಘ್ರವೇ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.</p>.<p>ಕೋವಿಡ್ನಿಂದ ಗುಣಮುಖರಾದವರ ಮೇಲೆ ಯಾವ ರೀತಿ ನಿಗಾ ವಹಿಸಲಾಗುತ್ತಿದೆ. ಅವರು ಅನುಸರಿಸಬೇಕಾದ ಎಚ್ಚರಿಕೆ ಹಾಗೂ ಇತರೆ ಕ್ರಮಗಳ ಬಗ್ಗೆ ಯಾವ ರೀತಿ ಅರಿವು ಮೂಡಿಸಲಾಗಿದೆ ಎಂಬ ವಿಷಯಗಳ ಬಗ್ಗೆಯೂ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು.</p>.<p><strong>ಬೂತ್ ಮಟ್ಟದ ಸಮಿತಿಗೆ ಜವಾಬ್ದಾರಿ: </strong>‘ಕೋವಿಡ್ ನಿಯಂತ್ರಣ ಬೂತ್ಮಟ್ಟದಿಂದ ಮಾತ್ರ ಸಾಧ್ಯ ಎಂಬುದನ್ನು ಮೊದಲಿನಿಂದ ಪ್ರತಿಪಾದಿಸಿದ್ದೇವೆ. ಬೂತ್ ಮಟ್ಟದಲ್ಲಿ ಸಮಿತಿ ರಚಿಸಿ, ಜಾಗೃತಿ ಮೂಡಿಸುವುದು ಹಾಗೂ ಕೊರೊನಾ ಪರೀಕ್ಷೆ ನಡೆಸುವುದರಿಂದ ಸುಲಭವಾಗಿ ಸೋಂಕು ಹರಡುವಿಕೆ ನಿಯಂತ್ರಣ ಸಾಧ್ಯ. ಈ ಜವಾಬ್ದಾರಿಯನ್ನು ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ವಹಿಸಿದರೆ ಇದರ ನಿರ್ವಹಣೆ ಸುಲಭ’ ಎಂದೂ ಸಚಿವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>