ಮಕ್ಕಳನ್ನು ಶಾಲೆಗೆ ಬಿಟ್ಟು ಮನೆಗೆ ಮರಳುತ್ತಿದ್ದ ಆಟೊ ಮೊಬೈಲ್ ವ್ಯಾಪಾರಿ ನಾಗವಾರ ಸಾರಾಯಿಪಾಳ್ಯದ ನಿವಾಸಿ ಸಯ್ಯದ್ ಇಮ್ರಾನ್ (39) ಅವರಿಗೆ ಥಣಿಸಂದ್ರ ಬಸ್ ನಿಲ್ದಾಣ ಬಳಿ ಟೆಂಪೊ ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇಮ್ರಾನ್ ಅವರಿಗೆ ಎಂಟು ಮತ್ತು ಐದು ವರ್ಷದ ಇಬ್ಬರು ಮಕ್ಕಳು ಇದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.