ಬೆಂಗಳೂರು: ‘ಕಾರ್ಪೋರೇಷನ್ ಬ್ಯಾಂಕ್ನ ಹಿಂದಿನ ಸಹಾಯಕ ವ್ಯವಸ್ಥಾಪಕ ಪಿ.ಎ. ಉತ್ತಮ್ ಅವರು ₹ 3.03 ಕೋಟಿ ವಂಚನೆ ಮಾಡಿದ್ದಾರೆ’ ಎಂದು ಆರೋಪಿಸಿ ಹಾಲಿಸಹಾಯಕ ವ್ಯವಸ್ಥಾಪಕ ಎಂ.ಆರ್.ಮನೋಹರ್, ಸಂಪಂಗಿರಾಮನಗರ ಠಾಣೆಗೆ ದೂರು ನೀಡಿದ್ದಾರೆ.
‘ಬ್ಯಾಂಕ್ನಲ್ಲಿ ರದ್ದಾದ ಡಿ.ಡಿ.ಗಳನ್ನು ಹೊಸ ಡಿ.ಡಿ.ಗಳಾಗಿ ಸೃಷ್ಟಿಸಿದ್ದ ಉತ್ತಮ್, ಅವುಗಳನ್ನು ಬಳಸಿ ಬ್ಯಾಂಕ್ನ ಹಣವನ್ನು ತನ್ನ ಹಾಗೂ ಇತರರ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆ ಮೂಲಕ ಬ್ಯಾಂಕ್ಗೆ ವಂಚಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಮನೋಹರ್ ಒತ್ತಾಯಿಸಿದ್ದಾರೆ.
ಪೊಲೀಸರು, ‘ಉತ್ತಮ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಬ್ಯಾಂಕ್ ವಹಿವಾಟಿನ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ’ ಎಂದರು.