ವಂಚನೆಗೆ ಸಂಬಂಧಪಟ್ಟಂತೆ ಕೆ.ಆರ್.ಪುರ ಠಾಣೆಯಲ್ಲಿ ಇತ್ತೀಚೆಗೆ ಎಫ್ಐಆರ್ ದಾಖಲಾಗಿತ್ತು. ಪ್ರಕರಣದ ಆರೋಪಿ, ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಾಗಲೇ ಆರೋಪಿಯನ್ನು ಅಕ್ರಮವಾಗಿ ವಶಕ್ಕೆ ಪಡೆದಿದ್ದ ಪೊಲೀಸರು, ಠಾಣೆಯಲ್ಲಿ ಇರಿಸಿಕೊಂಡಿದ್ದರೆಂದು ಮೂಲಗಳು ಹೇಳಿವೆ.