ಕೆಎಸ್ಐಎಸ್ಎಫ್ ಕಾನ್ಸ್ಟೆಬಲ್ಗಳಾದ ಹುಚ್ಚೇಗೌಡ, ತಿಮ್ಮಯ್ಯ, ಪ್ರವೀಣ್ ಕುಮಾರ್ ಅಮಾನತುಗೊಂಡವರು. ರಾಜಭವನದಿಂದ ಯಾವುದೇ ಅನುಮತಿ ಪಡೆಯದೆ ಈ ಸಿಬ್ಬಂದಿ, ತಮ್ಮ ವರ್ಗಾವಣೆ ಸಂಬಂಧ ಮೇಲಧಿಕಾರಿಯ ಭೇಟಿಗೆ ತೆರಳಿದ್ದರು. ಹೀಗಾಗಿ, ಒಂದನೇ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಕಮಾಂಡೆಂಟ್ ಮತ್ತು ಶಿಸ್ತು ಪ್ರಾಧಿಕಾರಿ ಎ. ನಾಗರಾಜ್ ಅವರು ಮೂವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಹಲವು ದಿನಗಳಿಂದ ರಾಜಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈ ಕಾನ್ಸ್ಟೆಬಲ್ಗಳು, ವರ್ಗಾವಣೆಗಾಗಿ ಹೋಗಿದ್ದರು ಎನ್ನುವ ಕಾರಣ ನೀಡಿ ಅಮಾನತು ಮಾಡಲಾಗಿದೆ.