‘ಇದಲ್ಲದೆ, ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆ, ಬೃಹತ್ ರಸ್ತೆಗಳು, ಮೇಲ್ಸೇತುವೆ, ಕಾರಿಡಾರ್ ಮುಂತಾದ ಯೋಜನೆಗಳು ಪ್ರಗತಿಯಲ್ಲಿದ್ದು, 2024ರ ಮಾರ್ಚ್ವರೆಗೆ ₹3,500 ಕೋಟಿಯಷ್ಟು ಬಿಲ್ಗಳ ಪಾವತಿ ಬಾಕಿ ಇರುತ್ತದೆ. ಈ ಬಿಲ್ಗಳನ್ನು ಸಕಾಲದಲ್ಲಿ ಪಾವತಿಸದಿದ್ದಲ್ಲಿ ಕಾಮಗಾರಿಗಳ ಪ್ರಗತಿಗೆ ಕುಂಠಿತವಾಗುವ ಸಂಭವವಿದೆ. ಆದ್ದರಿಂದ ಅನುದಾನ ಕಡಿತ ಮಾಡುವುದು ಬೇಡ’ ಎಂದು ಪ್ರಸ್ತಾವದಲ್ಲಿ ವಿವರಿಸಿದ್ದಾರೆ.