<p><strong>ಕೆ.ಆರ್.ಪುರ:</strong> ‘ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಪ್ರತಿವರ್ಷವೂ ಪ್ರೋತ್ಸಾಹಿಸುವ ಕೆಲಸವನ್ನುಡಿಎಸ್ ಮ್ಯಾಕ್ಸ್ ಸಂಸ್ಥೆ ಮಾಡುತ್ತಿದೆ’ ಎಂದು ಸಂಸ್ಥೆಯ ನಿರ್ದೇಶಕ ಎಸ್.ಪಿ.ದಯಾನಂದ ತಿಳಿಸಿದರು.</p>.<p>ಸರ್ವಜ್ಞನಗರದ ಎಚ್ಬಿಆರ್ ಬಡಾವಣೆಯ ಡಿಎಸ್ ಮ್ಯಾಕ್ಸ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ, ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿವರ್ಷ ಸಾಹಿತ್ಯ ಕ್ಷೇತ್ರದಲ್ಲಿ ಏಳು ಸಾಧಕರಿಗೆ ‘ಸಾಹಿತ್ಯ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿತ್ತು. ಕೊರೊನಾದಿಂದಾಗಿ ಈ ವರ್ಷ ಕಾರ್ಯಕ್ರಮ ರದ್ದು ಮಾಡಲಾಗಿದೆ’ ಎಂದರು.</p>.<p>‘ಕನ್ನಡ ಬರದೇ ಇರುವವರಿಗೂ ಕನ್ನಡ ಕಲಿಸುವ ಮೂಲಕ ಕನ್ನಡದ ಅಭಿಮಾನ ಮೂಡುವಂತೆ ಮಾಡಬೇಕು’ ಎಂದು ಹೇಳಿದರು.</p>.<p>ಕನ್ನಡ ಭುವನೇಶ್ವರಿಯ ಬೆಳ್ಳಿಯ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಿ ಮೆರವಣಿಗೆ ಮೂಲಕ ತರಲಾಯಿತು. ಡಿಎಸ್ ಮ್ಯಾಕ್ಸ್ ಸಂಸ್ಥೆಯ ಸಿಬ್ಬಂದಿ 360 ಅಡಿ ಉದ್ದದ ಕನ್ನಡ ಬಾವುಟವನ್ನು ಪ್ರದರ್ಶಿಸಿದರು. ಕನ್ನಡ ಹಾಗೂ ಕೊರೊನಾ ಜಾಗೃತಿಯ ಫಲಕಗಳನ್ನೂ ಪ್ರದರ್ಶಿಸಲಾಯಿತು.</p>.<p><strong>‘ಕಲೆ, ಜಾನಪದ ಉಳಿವು ಅಗತ್ಯ’</strong></p>.<p>ರಾಜರಾಜೇಶ್ವರಿನಗರ: ‘ಕನ್ನಡಭಾಷೆಯ ನಮ್ಮ ಮೂಲ ಸಂಸ್ಕೃತಿ, ಪರಂಪರೆ, ಕಲೆ, ಜಾನಪದ ಸೊಗಡನ್ನು ಉಳಿಸುವ ಕಾರ್ಯದಲ್ಲಿ ಕರ್ನಾಟಕ ಸಂಸ್ಕೃತಿ ವಿದ್ಯಾಪೀಠ ತೊಡಗಿಸಿಕೊಂಡಿದೆ’ ಎಂದು ಗಾಯಕ ಡಾ.ಗುರುರಾಜ ಹೊಸಕೋಟೆ ತಿಳಿಸಿದರು.</p>.<p>ಪಟ್ಟಣಗೆರೆಯ ಕರ್ನಾಟಕ ಸಂಸ್ಕೃತಿ ವಿದ್ಯಾಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ ನುಡಿಹಬ್ಬ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯಮಟ್ಟದ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧೆಡೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ಸಂಸ್ಥೆಯ ಅಧ್ಯಕ್ಷ ಬಸವಾನಂದಪ್ರಕಾಶ್, ಶ್ರೀಕುಮಾರನ್ಸ್ ಪದವಿ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥೆ ಎಸ್.ಇಂದ್ರಾಣಿ, ಕರ್ನಾಟಕ ಸಂಸ್ಕೃತಿ ವಿದ್ಯಾಪೀಠದ ಪ್ರಾಂಶುಪಾಲ ಡಿ.ಬಿ.ವಿವೇಕಾನಂದ, ನಿರ್ದೇಶಕ ಡಿ.ಬಿ.ವಿಜಯಾನಂದ ಮಾತನಾಡಿದರು.</p>.<p><strong>‘ಪಾಶ್ಚಾತ್ಯ ಸಂಸ್ಕೃತಿಗೆ ಮೊರೆ: ದುರಂತ’</strong></p>.<p>ಯಲಹಂಕ: ‘ಕನ್ನಡ ಹಲವು ವೈವಿಧ್ಯಗಳಿಂದ ಕೂಡಿದ ಶ್ರೇಷ್ಠ ಭಾಷೆಯಾಗಿದ್ದರೂ, ನಾವು ಪಾಶ್ಚಾತ್ಯ ಸಂಸ್ಕೃತಿಗೆ ಮೊರೆಹೋಗುತ್ತಿರುವುದು ದುರಂತದ ಸಂಗತಿ’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.</p>.<p>ತಾಲ್ಲೂಕು ಆಡಳಿತದ ವತಿಯಿಂದ ಮಿನಿವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆತ ದೇಶ ಎಂದಿಗೂ ಉಳಿಯುವುದಿಲ್ಲ. ಹೆತ್ತ ತಾಯಿಯನ್ನು ಗೌರವಿಸುವ ರೀತಿಯಲ್ಲಿ ತಾಯಿ ಕನ್ನಡಾಂಬೆಯನ್ನು ಪ್ರತಿನಿತ್ಯ ಆರಾಧಿಸಬೇಕು. ಇತರೆ ಭಾಷೆಗಳನ್ನು ವ್ಯವಹಾರಿಕವಾಗಿ ಬಳಸಿದರೂ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.</p>.<p class="Subhead">ಯಲಹಂಕ ರತ್ನ ಪ್ರಶಸ್ತಿ:</p>.<p>ಕೊರೊನಾ ಸೇನಾನಿಗಳಾಗಿ ಕಾರ್ಯನಿರ್ವಹಿಸಿದ ಶಾಸಕ ವಿಶ್ವನಾಥ್ ಅವರ ಆಪ್ತಸಹಾಯಕರಾಗಿದ್ದ ದಿವಂಗತ ಎಚ್.ಡಿ.ಮುನಿಆಂಜಿನಪ್ಪ ಅವರಿಗೆ ನೀಡಲಾದ ಮರಣೋತ್ತರ ಪ್ರಶಸ್ತಿಯನ್ನು ಸಹೋದರ ಎಚ್.ಡಿ.ಕೃಷ್ಣಪ್ಪ ಸ್ವೀಕರಿಸಿದರು.</p>.<p>ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತ ಡಾ.ಅಶೋಕ್, ವೈದ್ಯರಾದ ಡಾ.ರೂಪರ್ಶಿ, ಡಾ.ಉಷಾ ಹಾಗೂ ಡಾ.ಅರ್ಚನಾ ಅವರಿಗೆ ‘ಯಲಹಂಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ವಿಶೇಷ ತಹಶೀಲ್ದಾರ್ ಕೆ.ಮಂಜುನಾಥ್, ಬಿಬಿಎಂಪಿ ಮಾಜಿ ಸದಸ್ಯ ಎಂ.ಸತೀಶ್, ಮುಖಂಡರಾದ ರಾಜಣ್ಣ, ಕಡತನಮಲೆ ಸತೀಶ್, ಮುನಿಕೃಷ್ಣಪ್ಪ, ಹನುಮಯ್ಯ, ಯಲಹಂಕ ಕ.ಸಾ.ಪ ಅಧ್ಯಕ್ಷ ಎಸ್ಎಲ್ಎನ್ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಅ.ಬ.ಶಿವಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಪ್ರತಿವರ್ಷವೂ ಪ್ರೋತ್ಸಾಹಿಸುವ ಕೆಲಸವನ್ನುಡಿಎಸ್ ಮ್ಯಾಕ್ಸ್ ಸಂಸ್ಥೆ ಮಾಡುತ್ತಿದೆ’ ಎಂದು ಸಂಸ್ಥೆಯ ನಿರ್ದೇಶಕ ಎಸ್.ಪಿ.ದಯಾನಂದ ತಿಳಿಸಿದರು.</p>.<p>ಸರ್ವಜ್ಞನಗರದ ಎಚ್ಬಿಆರ್ ಬಡಾವಣೆಯ ಡಿಎಸ್ ಮ್ಯಾಕ್ಸ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ, ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿವರ್ಷ ಸಾಹಿತ್ಯ ಕ್ಷೇತ್ರದಲ್ಲಿ ಏಳು ಸಾಧಕರಿಗೆ ‘ಸಾಹಿತ್ಯ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿತ್ತು. ಕೊರೊನಾದಿಂದಾಗಿ ಈ ವರ್ಷ ಕಾರ್ಯಕ್ರಮ ರದ್ದು ಮಾಡಲಾಗಿದೆ’ ಎಂದರು.</p>.<p>‘ಕನ್ನಡ ಬರದೇ ಇರುವವರಿಗೂ ಕನ್ನಡ ಕಲಿಸುವ ಮೂಲಕ ಕನ್ನಡದ ಅಭಿಮಾನ ಮೂಡುವಂತೆ ಮಾಡಬೇಕು’ ಎಂದು ಹೇಳಿದರು.</p>.<p>ಕನ್ನಡ ಭುವನೇಶ್ವರಿಯ ಬೆಳ್ಳಿಯ ಮೂರ್ತಿಗೆ ವಿಶೇಷ ಪೂಜೆ ನೆರವೇರಿಸಿ ಮೆರವಣಿಗೆ ಮೂಲಕ ತರಲಾಯಿತು. ಡಿಎಸ್ ಮ್ಯಾಕ್ಸ್ ಸಂಸ್ಥೆಯ ಸಿಬ್ಬಂದಿ 360 ಅಡಿ ಉದ್ದದ ಕನ್ನಡ ಬಾವುಟವನ್ನು ಪ್ರದರ್ಶಿಸಿದರು. ಕನ್ನಡ ಹಾಗೂ ಕೊರೊನಾ ಜಾಗೃತಿಯ ಫಲಕಗಳನ್ನೂ ಪ್ರದರ್ಶಿಸಲಾಯಿತು.</p>.<p><strong>‘ಕಲೆ, ಜಾನಪದ ಉಳಿವು ಅಗತ್ಯ’</strong></p>.<p>ರಾಜರಾಜೇಶ್ವರಿನಗರ: ‘ಕನ್ನಡಭಾಷೆಯ ನಮ್ಮ ಮೂಲ ಸಂಸ್ಕೃತಿ, ಪರಂಪರೆ, ಕಲೆ, ಜಾನಪದ ಸೊಗಡನ್ನು ಉಳಿಸುವ ಕಾರ್ಯದಲ್ಲಿ ಕರ್ನಾಟಕ ಸಂಸ್ಕೃತಿ ವಿದ್ಯಾಪೀಠ ತೊಡಗಿಸಿಕೊಂಡಿದೆ’ ಎಂದು ಗಾಯಕ ಡಾ.ಗುರುರಾಜ ಹೊಸಕೋಟೆ ತಿಳಿಸಿದರು.</p>.<p>ಪಟ್ಟಣಗೆರೆಯ ಕರ್ನಾಟಕ ಸಂಸ್ಕೃತಿ ವಿದ್ಯಾಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ ನುಡಿಹಬ್ಬ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯಮಟ್ಟದ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧೆಡೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ಸಂಸ್ಥೆಯ ಅಧ್ಯಕ್ಷ ಬಸವಾನಂದಪ್ರಕಾಶ್, ಶ್ರೀಕುಮಾರನ್ಸ್ ಪದವಿ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥೆ ಎಸ್.ಇಂದ್ರಾಣಿ, ಕರ್ನಾಟಕ ಸಂಸ್ಕೃತಿ ವಿದ್ಯಾಪೀಠದ ಪ್ರಾಂಶುಪಾಲ ಡಿ.ಬಿ.ವಿವೇಕಾನಂದ, ನಿರ್ದೇಶಕ ಡಿ.ಬಿ.ವಿಜಯಾನಂದ ಮಾತನಾಡಿದರು.</p>.<p><strong>‘ಪಾಶ್ಚಾತ್ಯ ಸಂಸ್ಕೃತಿಗೆ ಮೊರೆ: ದುರಂತ’</strong></p>.<p>ಯಲಹಂಕ: ‘ಕನ್ನಡ ಹಲವು ವೈವಿಧ್ಯಗಳಿಂದ ಕೂಡಿದ ಶ್ರೇಷ್ಠ ಭಾಷೆಯಾಗಿದ್ದರೂ, ನಾವು ಪಾಶ್ಚಾತ್ಯ ಸಂಸ್ಕೃತಿಗೆ ಮೊರೆಹೋಗುತ್ತಿರುವುದು ದುರಂತದ ಸಂಗತಿ’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.</p>.<p>ತಾಲ್ಲೂಕು ಆಡಳಿತದ ವತಿಯಿಂದ ಮಿನಿವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆತ ದೇಶ ಎಂದಿಗೂ ಉಳಿಯುವುದಿಲ್ಲ. ಹೆತ್ತ ತಾಯಿಯನ್ನು ಗೌರವಿಸುವ ರೀತಿಯಲ್ಲಿ ತಾಯಿ ಕನ್ನಡಾಂಬೆಯನ್ನು ಪ್ರತಿನಿತ್ಯ ಆರಾಧಿಸಬೇಕು. ಇತರೆ ಭಾಷೆಗಳನ್ನು ವ್ಯವಹಾರಿಕವಾಗಿ ಬಳಸಿದರೂ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ತಿಳಿಸಿದರು.</p>.<p class="Subhead">ಯಲಹಂಕ ರತ್ನ ಪ್ರಶಸ್ತಿ:</p>.<p>ಕೊರೊನಾ ಸೇನಾನಿಗಳಾಗಿ ಕಾರ್ಯನಿರ್ವಹಿಸಿದ ಶಾಸಕ ವಿಶ್ವನಾಥ್ ಅವರ ಆಪ್ತಸಹಾಯಕರಾಗಿದ್ದ ದಿವಂಗತ ಎಚ್.ಡಿ.ಮುನಿಆಂಜಿನಪ್ಪ ಅವರಿಗೆ ನೀಡಲಾದ ಮರಣೋತ್ತರ ಪ್ರಶಸ್ತಿಯನ್ನು ಸಹೋದರ ಎಚ್.ಡಿ.ಕೃಷ್ಣಪ್ಪ ಸ್ವೀಕರಿಸಿದರು.</p>.<p>ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತ ಡಾ.ಅಶೋಕ್, ವೈದ್ಯರಾದ ಡಾ.ರೂಪರ್ಶಿ, ಡಾ.ಉಷಾ ಹಾಗೂ ಡಾ.ಅರ್ಚನಾ ಅವರಿಗೆ ‘ಯಲಹಂಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ವಿಶೇಷ ತಹಶೀಲ್ದಾರ್ ಕೆ.ಮಂಜುನಾಥ್, ಬಿಬಿಎಂಪಿ ಮಾಜಿ ಸದಸ್ಯ ಎಂ.ಸತೀಶ್, ಮುಖಂಡರಾದ ರಾಜಣ್ಣ, ಕಡತನಮಲೆ ಸತೀಶ್, ಮುನಿಕೃಷ್ಣಪ್ಪ, ಹನುಮಯ್ಯ, ಯಲಹಂಕ ಕ.ಸಾ.ಪ ಅಧ್ಯಕ್ಷ ಎಸ್ಎಲ್ಎನ್ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಅ.ಬ.ಶಿವಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>