<p><strong>ಬೆಂಗಳೂರು:</strong> ‘ಉತ್ತರ ವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಕೊಲೆ ಹಾಗೂ ಕೊಲೆ ಯತ್ನ ಪ್ರಕರಣದ 358 ಆರೋಪಿಗಳ ಹೆಸರನ್ನು ಈಗಾಗಲೇ ರೌಡಿಪಟ್ಟಿಗೆ ಸೇರಿಸಲಾಗಿದ್ದು, ಇನ್ನು 368 ಮಂದಿ ಹೆಸರನ್ನು ಪಟ್ಟಿಗೆ ಸೇರಿಸಲಾಗುವುದು’ ಎಂದು ಡಿಸಿಪಿ ಶಶಿಕುಮಾರ್ ಹೇಳಿದರು.</p>.<p>ನಗರದ ಮಲ್ಲೇಶ್ವರ ಆಟದ ಮೈದಾನದಲ್ಲಿ ಗುರುವಾರ ರೌಡಿ ಪರೇಡ್ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ಬಕ್ರೀದ್ ಹಬ್ಬ ಹಾಗೂ ಸ್ವಾತಂತ್ರ್ಯ ದಿನಾಚರಣೆ ಹತ್ತಿರವಿದೆ. ಇಂಥ ಸಂದರ್ಭದಲ್ಲಿ ಪ್ರತಿಯೊಂದು ಠಾಣೆ ವ್ಯಾಪ್ತಿಯ ರೌಡಿಗಳ ಪರೇಡ್ ನಡೆಸಿ, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಉತ್ತರ ವಿಭಾಗದಲ್ಲಿ 2017ರಿಂದ 2019ರ ಅವಧಿಯಲ್ಲಿ 93 ಕೊಲೆ ಪ್ರಕರಣಗಳು ವರದಿಯಾಗಿದ್ದು, 81 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಬ್ಬರು ಆರೋಪಿಗಳು ಮೃತರಾಗಿದ್ದಾರೆ. ಕೊಲೆ ಯತ್ನ ಆರೋಪದಡಿ 313 ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಭಾಗಿಯಾಗಿದ್ದ 87 ರೌಡಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದರು.</p>.<p class="Subhead"><strong>379 ರೌಡಿಗಳು ಭಾಗಿ: </strong>ಡಿಸಿಪಿ ಶಶಿಕುಮಾರ್ ನಡೆಸಿದ ಪರೇಡ್ನಲ್ಲಿ 18 ಪೊಲೀಸ್ ಠಾಣೆಯ 779 ರೌಡಿಗಳ ಪೈಕಿ 379 ರೌಡಿಗಳು ಮಾತ್ರ ಬಂದಿದ್ದರು. 142 ರೌಡಿಗಳು ನ್ಯಾಯಾಂಗ ಬಂಧನದಲ್ಲಿರುವುದಾಗಿ ಪೊಲೀಸರು ಹೇಳಿದರು.</p>.<p>ವಿಚಿತ್ರವಾಗಿ ತಲೆಗೂದಲು ಕತ್ತರಿಸಿಕೊಂಡಿದ್ದ ಹಾಗೂ ಕಿವಿಯಲ್ಲಿ ಒಲೆ ಹಾಕಿಕೊಂಡಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ ಶಶಿಕುಮಾರ್, ‘ವಿಚಿತ್ರವಾಗಿ ಕಾಣಿಸಿಕೊಳ್ಳುವ ಮೂಲಕ ಜನರನ್ನು ಹೆದರಿಸೋಕೆ ಹೋದರೆ ಪರಿಣಾಮ ನೆಟ್ಟಗಿರಲ್ಲ. ಕೊದಲನ್ನು ಚೆನ್ನಾಗಿ ಕತ್ತರಿಸಿಕೊ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಉತ್ತರ ವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಕೊಲೆ ಹಾಗೂ ಕೊಲೆ ಯತ್ನ ಪ್ರಕರಣದ 358 ಆರೋಪಿಗಳ ಹೆಸರನ್ನು ಈಗಾಗಲೇ ರೌಡಿಪಟ್ಟಿಗೆ ಸೇರಿಸಲಾಗಿದ್ದು, ಇನ್ನು 368 ಮಂದಿ ಹೆಸರನ್ನು ಪಟ್ಟಿಗೆ ಸೇರಿಸಲಾಗುವುದು’ ಎಂದು ಡಿಸಿಪಿ ಶಶಿಕುಮಾರ್ ಹೇಳಿದರು.</p>.<p>ನಗರದ ಮಲ್ಲೇಶ್ವರ ಆಟದ ಮೈದಾನದಲ್ಲಿ ಗುರುವಾರ ರೌಡಿ ಪರೇಡ್ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ಬಕ್ರೀದ್ ಹಬ್ಬ ಹಾಗೂ ಸ್ವಾತಂತ್ರ್ಯ ದಿನಾಚರಣೆ ಹತ್ತಿರವಿದೆ. ಇಂಥ ಸಂದರ್ಭದಲ್ಲಿ ಪ್ರತಿಯೊಂದು ಠಾಣೆ ವ್ಯಾಪ್ತಿಯ ರೌಡಿಗಳ ಪರೇಡ್ ನಡೆಸಿ, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಉತ್ತರ ವಿಭಾಗದಲ್ಲಿ 2017ರಿಂದ 2019ರ ಅವಧಿಯಲ್ಲಿ 93 ಕೊಲೆ ಪ್ರಕರಣಗಳು ವರದಿಯಾಗಿದ್ದು, 81 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಬ್ಬರು ಆರೋಪಿಗಳು ಮೃತರಾಗಿದ್ದಾರೆ. ಕೊಲೆ ಯತ್ನ ಆರೋಪದಡಿ 313 ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ ಭಾಗಿಯಾಗಿದ್ದ 87 ರೌಡಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದರು.</p>.<p class="Subhead"><strong>379 ರೌಡಿಗಳು ಭಾಗಿ: </strong>ಡಿಸಿಪಿ ಶಶಿಕುಮಾರ್ ನಡೆಸಿದ ಪರೇಡ್ನಲ್ಲಿ 18 ಪೊಲೀಸ್ ಠಾಣೆಯ 779 ರೌಡಿಗಳ ಪೈಕಿ 379 ರೌಡಿಗಳು ಮಾತ್ರ ಬಂದಿದ್ದರು. 142 ರೌಡಿಗಳು ನ್ಯಾಯಾಂಗ ಬಂಧನದಲ್ಲಿರುವುದಾಗಿ ಪೊಲೀಸರು ಹೇಳಿದರು.</p>.<p>ವಿಚಿತ್ರವಾಗಿ ತಲೆಗೂದಲು ಕತ್ತರಿಸಿಕೊಂಡಿದ್ದ ಹಾಗೂ ಕಿವಿಯಲ್ಲಿ ಒಲೆ ಹಾಕಿಕೊಂಡಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ ಶಶಿಕುಮಾರ್, ‘ವಿಚಿತ್ರವಾಗಿ ಕಾಣಿಸಿಕೊಳ್ಳುವ ಮೂಲಕ ಜನರನ್ನು ಹೆದರಿಸೋಕೆ ಹೋದರೆ ಪರಿಣಾಮ ನೆಟ್ಟಗಿರಲ್ಲ. ಕೊದಲನ್ನು ಚೆನ್ನಾಗಿ ಕತ್ತರಿಸಿಕೊ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>