ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮುಂಬಡ್ತಿ ಪ್ರಕ್ರಿಯೆಗೆ ಮರು ಚಾಲನೆ ನೀಡಲಾಗಿದ್ದು, 394 ಸಿಬ್ಬಂದಿಗೆ ಬಡ್ತಿ ನೀಡಲಾಗಿದೆ ಎಂದು ಬಿಬಿಎಂಪಿ ಸಿಬ್ಬಂದಿ ಮತ್ತು ಆಡಳಿತ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಣ್ಣ ಹೇಳಿದರು.
‘ಸೇವಾ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಲಾಗಿದ್ದು, ಅದರ ಆಧಾರದ ಮೇಲೆಯೇ ಬಡ್ತಿ ನೀಡಲಾಗಿದೆ’ ಎಂದು ತಿಳಿಸಿದರು. ‘ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾದರ್ಶಕತೆ ತರಲಾಗಿದ್ದು, ಕೌನ್ಸೆಲಿಂಗ್ ಮೂಲಕ 2,099 ನೌಕರರನ್ನು ಅಂತರ ವಲಯಕ್ಕೆ ವರ್ಗ ಮಾಡಲಾಗಿದೆ’ ಎಂದು ಹೇಳಿದರು.