‘ಬಿಡುಗಡೆ’ ಹಾಗೂ ‘ಆಕಾಶಕ್ಕೆ ನೀಲಿ ಪರದೆ’ ಕುರಿತು ಮಾತನಾಡಿದ ವಿಮರ್ಶಕ ಎಚ್.ಎಸ್. ಸತ್ಯನಾರಾಯಣ, ‘ಈ ಎರಡೂ ಕಥಾ ಸಂಕಲನದ ಬಹುತೇಕ ಕಥೆಗಳು ಮನುಷ್ಯ ಸಂಬಂಧಗಳ ಸ್ವರೂಪ-ಸ್ವಭಾವಗಳನ್ನು ತಿಳಿಸುತ್ತವೆ. ಇಲ್ಲಿ ಸಂಯಮದ ಕಥೆಗಳಿದ್ದು, ಮನಸ್ಸಿನ ಸೂಕ್ಷ್ಮ ಪದರುಗಳನ್ನು ವಿಶ್ಲೇಷಿಸುತ್ತವೆ’ ಎಂದು ಅಭಿಪ್ರಾಯಪಟ್ಟರು.