<p><strong>ಬೆಂಗಳೂರು</strong>: ₹ 40 ಲಕ್ಷಕ್ಕೆ ಬೇಡಿಕೆ ಇರಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮಾರತ್ತಹಳ್ಳಿ ಠಾಣೆಯ ಪಿಎಸ್ಐ ರಂಗೇಶ್ ಹಾಗೂ ಕಾನ್ಸ್ಟೆಬಲ್ಗಳಾದ ಮಹದೇವಸ್ವಾಮಿ, ಮಹೇಶ್ ಬಂಧನಕ್ಕೆ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ.</p>.<p>ಬಾಗಲೂರು ಠಾಣೆಯಲ್ಲಿ ದಾಖಲಾಗಿದ್ದ ರಾಮಾಂಜನಿ ಎಂಬುವವರ ಅಪಹರಣ ಪ್ರಕರಣದ ಬೆನ್ನು ಬಿದ್ದಿರುವ ಪೊಲೀಸರು, ಮಾರತ್ತಹಳ್ಳಿ ಠಾಣೆಯ ಹೆಡ್ ಕಾನ್ಸ್ಟೆಬಲ್ ಹರೀಶ್ ಸೇರಿ ಮೂವರನ್ನು ಈಗಾಗಲೇ ಬಂಧಿಸಿದ್ದಾರೆ.</p>.<p>‘ಹುಲಿ ಚರ್ಮ, ಉಗುರು ಮಾರಾಟ ನೆಪದಲ್ಲಿ ರಾಮಾಂಜನಿ ಅವರನ್ನು ವಶಕ್ಕೆ ಪಡೆದಿದ್ದ ಪಿಎಸ್ಐ ಹಾಗೂ ಇತರರು, ಅಕ್ರಮ ಬಂಧನದಲ್ಲಿಟ್ಟು ₹ 40 ಲಕ್ಷಕ್ಕೆ ಬೇಡಿಕೆ ಇರಿಸಿದ್ದರು. ಪ್ರಮುಖ ಆರೋಪಿ ರಂಗೇಶ್ ಹಾಗೂ ಕಾನ್ಸ್ಟೆಬಲ್ಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ಮುಂದುವರಿದಿದೆ’ ಎಂದು ಬಾಗಲೂರು ಪೊಲೀಸರು ಹೇಳಿದರು.</p>.<p>‘ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ರಂಗೇಶ್ ಹುಟ್ಟೂರಿಗೂ ವಿಶೇಷ ತಂಡ ಹೋಗಿದೆ. ಆದರೆ, ಪಿಎಸ್ಐ ಅಲ್ಲಿಲ್ಲ. ಬಂಧನ ಭೀತಿಯಿಂದ ನಗರದಿಂದ ನಗರಕ್ಕೆ ಸ್ಥಳ ಬದಲಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ’ ಎಂದರು.</p>.<p class="Subhead">ವಂಚನೆ ಪ್ರಕರಣ ದಾಖಲು: ‘ನಕಲಿ ಚರ್ಮ, ಉಗುರುಗಳನ್ನು ಅಸಲಿ ಎಂಬುದಾಗಿ ಬಿಂಬಿಸಿ ಸಾರ್ವಜನಿಕರಿಗೆ ಮಾರಲು ಯತ್ನಿಸುತ್ತಿದ್ದ ಆರೋಪದಡಿ ಸಿದ್ದಮಲ್ಲಪ್ಪ ಹಾಗೂ ರಾಮಾಂಜನಿ ವಿರುದ್ಧ ಮಾರತ್ತಹಳ್ಳಿ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಅದರ ವಿಚಾರಣೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ₹ 40 ಲಕ್ಷಕ್ಕೆ ಬೇಡಿಕೆ ಇರಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮಾರತ್ತಹಳ್ಳಿ ಠಾಣೆಯ ಪಿಎಸ್ಐ ರಂಗೇಶ್ ಹಾಗೂ ಕಾನ್ಸ್ಟೆಬಲ್ಗಳಾದ ಮಹದೇವಸ್ವಾಮಿ, ಮಹೇಶ್ ಬಂಧನಕ್ಕೆ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ.</p>.<p>ಬಾಗಲೂರು ಠಾಣೆಯಲ್ಲಿ ದಾಖಲಾಗಿದ್ದ ರಾಮಾಂಜನಿ ಎಂಬುವವರ ಅಪಹರಣ ಪ್ರಕರಣದ ಬೆನ್ನು ಬಿದ್ದಿರುವ ಪೊಲೀಸರು, ಮಾರತ್ತಹಳ್ಳಿ ಠಾಣೆಯ ಹೆಡ್ ಕಾನ್ಸ್ಟೆಬಲ್ ಹರೀಶ್ ಸೇರಿ ಮೂವರನ್ನು ಈಗಾಗಲೇ ಬಂಧಿಸಿದ್ದಾರೆ.</p>.<p>‘ಹುಲಿ ಚರ್ಮ, ಉಗುರು ಮಾರಾಟ ನೆಪದಲ್ಲಿ ರಾಮಾಂಜನಿ ಅವರನ್ನು ವಶಕ್ಕೆ ಪಡೆದಿದ್ದ ಪಿಎಸ್ಐ ಹಾಗೂ ಇತರರು, ಅಕ್ರಮ ಬಂಧನದಲ್ಲಿಟ್ಟು ₹ 40 ಲಕ್ಷಕ್ಕೆ ಬೇಡಿಕೆ ಇರಿಸಿದ್ದರು. ಪ್ರಮುಖ ಆರೋಪಿ ರಂಗೇಶ್ ಹಾಗೂ ಕಾನ್ಸ್ಟೆಬಲ್ಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ಮುಂದುವರಿದಿದೆ’ ಎಂದು ಬಾಗಲೂರು ಪೊಲೀಸರು ಹೇಳಿದರು.</p>.<p>‘ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ರಂಗೇಶ್ ಹುಟ್ಟೂರಿಗೂ ವಿಶೇಷ ತಂಡ ಹೋಗಿದೆ. ಆದರೆ, ಪಿಎಸ್ಐ ಅಲ್ಲಿಲ್ಲ. ಬಂಧನ ಭೀತಿಯಿಂದ ನಗರದಿಂದ ನಗರಕ್ಕೆ ಸ್ಥಳ ಬದಲಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ’ ಎಂದರು.</p>.<p class="Subhead">ವಂಚನೆ ಪ್ರಕರಣ ದಾಖಲು: ‘ನಕಲಿ ಚರ್ಮ, ಉಗುರುಗಳನ್ನು ಅಸಲಿ ಎಂಬುದಾಗಿ ಬಿಂಬಿಸಿ ಸಾರ್ವಜನಿಕರಿಗೆ ಮಾರಲು ಯತ್ನಿಸುತ್ತಿದ್ದ ಆರೋಪದಡಿ ಸಿದ್ದಮಲ್ಲಪ್ಪ ಹಾಗೂ ರಾಮಾಂಜನಿ ವಿರುದ್ಧ ಮಾರತ್ತಹಳ್ಳಿ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಅದರ ವಿಚಾರಣೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>