<p><strong>ಬೆಂಗಳೂರು: </strong>ಕೊರೊನಾ ಸೋಂಕು ಹರಡುವಿಕೆ ತಡೆಗೆ ಜಾರಿಗೊಳಿಸಿರುವ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 1.86 ಲಕ್ಷ ಮಂದಿಯಿಂದ ₹ 4.54 ಕೋಟಿ ದಂಡ ಸಂಗ್ರಹಿಸಲಾಗಿದೆ.</p>.<p>ನಗರದ ಪೊಲೀಸರು ಪ್ರತಿಯೊಂದು ವಿಭಾಗ ವ್ಯಾಪ್ತಿಯಲ್ಲೂ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಾಸ್ಕ್ ಹಾಕದ ಹಾಗೂ ಅಂತರ ಕಾಯ್ದುಕೊಳ್ಳದವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುತ್ತಿದ್ದಾರೆ.</p>.<p>‘ಮಾಸ್ಕ್ ಧರಿಸದ 1.52 ಲಕ್ಷ ಹಾಗೂ ಅಂತರ ಕಾಯ್ದುಕೊಳ್ಳದ 34 ಸಾವಿರ ಮಂದಿಗೆ ದಂಡ ವಿಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p class="Subhead">48,615 ವಾಹನ ಜಪ್ತಿ; ಲಾಕ್ಡೌನ್ ವೇಳೆಯಲ್ಲಿ ಅನಗತ್ಯವಾಗಿ ಸಂಚರಿಸಿದ್ದವರ 46,448 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>’43,206 ದ್ವಿಚಕ್ರ ವಾಹನ, 2,326 ಮೂರು ಚಕ್ರ ವಾಹನ ಹಾಗೂ 3.083 ನಾಲ್ಕು ಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಅಧಿಕಾರಿ ತಿಳಿಸಿದರು.</p>.<p>‘ಜಪ್ತಿ ಮಾಡಲಾದ ವಾಹನಗಳನ್ನು ಆಯಾ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ವಾಹನಗಳ ಬಿಡುಗಡೆ ಪ್ರಕ್ರಿಯೆ ನಡೆಯಲಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ಸೋಂಕು ಹರಡುವಿಕೆ ತಡೆಗೆ ಜಾರಿಗೊಳಿಸಿರುವ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 1.86 ಲಕ್ಷ ಮಂದಿಯಿಂದ ₹ 4.54 ಕೋಟಿ ದಂಡ ಸಂಗ್ರಹಿಸಲಾಗಿದೆ.</p>.<p>ನಗರದ ಪೊಲೀಸರು ಪ್ರತಿಯೊಂದು ವಿಭಾಗ ವ್ಯಾಪ್ತಿಯಲ್ಲೂ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಾಸ್ಕ್ ಹಾಕದ ಹಾಗೂ ಅಂತರ ಕಾಯ್ದುಕೊಳ್ಳದವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುತ್ತಿದ್ದಾರೆ.</p>.<p>‘ಮಾಸ್ಕ್ ಧರಿಸದ 1.52 ಲಕ್ಷ ಹಾಗೂ ಅಂತರ ಕಾಯ್ದುಕೊಳ್ಳದ 34 ಸಾವಿರ ಮಂದಿಗೆ ದಂಡ ವಿಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p class="Subhead">48,615 ವಾಹನ ಜಪ್ತಿ; ಲಾಕ್ಡೌನ್ ವೇಳೆಯಲ್ಲಿ ಅನಗತ್ಯವಾಗಿ ಸಂಚರಿಸಿದ್ದವರ 46,448 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>’43,206 ದ್ವಿಚಕ್ರ ವಾಹನ, 2,326 ಮೂರು ಚಕ್ರ ವಾಹನ ಹಾಗೂ 3.083 ನಾಲ್ಕು ಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಅಧಿಕಾರಿ ತಿಳಿಸಿದರು.</p>.<p>‘ಜಪ್ತಿ ಮಾಡಲಾದ ವಾಹನಗಳನ್ನು ಆಯಾ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ವಾಹನಗಳ ಬಿಡುಗಡೆ ಪ್ರಕ್ರಿಯೆ ನಡೆಯಲಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>