<p>ಬೆಂಗಳೂರು: ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿ ಯೋಜನೆಯಡಿ ರಸ್ತೆ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿಯಾಗಿ ₹119.62 ಕೋಟಿ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಕಾಮಗಾರಿಗಳಿಗೆ 4ಜಿ ವಿನಾಯಿತಿಯನ್ನೂ (ಟೆಂಡರ್ ಕರೆಯದೇ ಕಾಮಗಾರಿ ನಿರ್ವಹಿಸುವುದು) ಕೋರಿರುವುದು ಚರ್ಚೆಗೆ ಗ್ರಾಸವಾಗಿದೆ.</p>.<p>ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರವೇ ಅತೀ ಹೆಚ್ಚು 31 ಹಳ್ಳಿಗಳನ್ನು ಒಳಗೊಂಡಿದೆ. ಪ್ರಸಕ್ತ ಸಾಲಿನಲ್ಲಿ 110 ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ₹1 ಸಾವಿರ ಕೋಟಿ ಬಿಡುಗಡೆ ಮಾಡಿದ ಸರ್ಕಾರ, ಈ ಕ್ಷೇತ್ರಕ್ಕೆ ₹210 ಕೋಟಿ ಬಿಡುಗಡೆ ಮಾಡಿತು. ಈ ಅನುದಾನದಲ್ಲಿ 114 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಕೂಡ ಅಂತಿಮ ಹಂತದಲ್ಲಿದೆ.</p>.<p>ಐ.ಟಿ ಕಂಪನಿಗಳ ಬೀಡಾಗಿರುವ ಈ ಕ್ಷೇತ್ರದಲ್ಲಿ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, 110 ಹಳ್ಳಿ ಯೋಜನೆಯಡಿ ಪೈಪ್ಲೈನ್ ಅಳವಡಿಕೆಗೆ ಅಗೆದಿರುವ ರಸ್ತೆಗಳ ಮರು ನಿರ್ಮಾಣ ಕಾಮಗಾರಿ ಜರೂರಾಗಿ ಆಗಬೇಕಿದೆ. ಹೆಚ್ಚುವರಿಯಾಗಿ ₹78.32 ಕೋಟಿ ಮತ್ತು ₹41.30 ಕೋಟಿ ಅನುದಾನ ಕೋರಿ ಎರಡು ಪ್ರಸ್ತಾವನೆಗಳನ್ನು ಬಿಬಿಎಂಪಿ ಮಹದೇವಪುರ ವಲಯದಿಂದ ಸಲ್ಲಿಸಲಾಗಿದೆ.</p>.<p>₹78.32 ಕೋಟಿ ಮೊತ್ತದ ಮೊದಲ ಪ್ರಸ್ತಾವನೆಯಲ್ಲಿ ಕಾಡುಗೋಡಿ, ಹಗದೂರು, ದೊಡ್ಡನೆಕ್ಕುಂದಿ, ಬೆಳ್ಳಂದೂರು, ಹೂಡಿ ಮತ್ತು ವರ್ತೂರು ವಾರ್ಡ್ಗಳಲ್ಲಿ ಒಟ್ಟು 73 ಕಾಮಗಾರಿಗಳನ್ನು ಪಟ್ಟಿ ಮಾಡಲಾಗಿದೆ. ₹41.30 ಕೋಟಿ ಮೊತ್ತದ ಎರಡನೇ ಪ್ರಸ್ತಾವನೆಯಲ್ಲಿ ಹೂಡಿ, ಕಾಡುಗೋಡಿ, ಹಗದೂರು, ವರ್ತೂರು, ಬೆಳ್ಳಂದೂರು ವಾರ್ಡ್ ವ್ಯಾಪ್ತಿಯಲ್ಲಿ 59 ಕಾಮಗಾರಿಗಳನ್ನು ಪಟ್ಟಿ ಮಾಡಲಾಗಿದೆ.</p>.<p>ಬಿಬಿಎಂಪಿ ಮುಖ್ಯ ಆಯುಕ್ತರ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಅನುಮೋದನೆಗೆ ಬಾಕಿ ಇದೆ. ಈ ಹೆಚ್ಚುವರಿ ಅನುದಾನದಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕಿದೆ ಎಂಬ ಕಾರಣಕ್ಕೆ 4ಜಿ ವಿನಾಯಿತಿ ಪಡೆಯುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.</p>.<p>ವಾಹನ ದಟ್ಟಣೆ ಹೆಚ್ಚಿರುವುದರಿಂದ ಮುಂಗಾರು ಪೂರ್ವ ಮಳೆ ಆರಂಭಕ್ಕೂ ಮುನ್ನವೇ ಕಾಮಗಾರಿ ಮುಗಿಸಬೇಕಿದೆ. ಟೆಂಡರ್ ಪ್ರಕ್ರಿಯೆ ನಡೆಸಿದರೆ ಕಾಮಗಾರಿ ವಿಳಂಬವಾಗಲಿದ್ದು, 4ಜಿ ವಿನಾಯಿತಿ ನೀಡಬೇಕು ಎಂಬ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಡಲಾಗಿದೆ.</p>.<p>‘4ಜಿ ವಿನಾಯಿತಿ ಪಡೆದು ಬಿಬಿಎಂಪಿ ಚುನಾವಣೆಗೂ ಮುನ್ನ ತಮ್ಮ ಹಿಂಬಾಲಕರಿಗೆ ತುಂಡು ಗುತ್ತಿಗೆ ಕೊಡಿಸುವ ಉದ್ದೇಶವನ್ನು ಸ್ಥಳೀಯ ಜನಪ್ರತಿನಿಧಿಯೊಬ್ಬರು ಹೊಂದಿದ್ದಾರೆ’ ಎಂದು ಬಿಬಿಎಂಪಿ ಎಂಜಿನಿಯರ್ಗಳೇ ಹೇಳುತ್ತಾರೆ.</p>.<p>‘ಮಹದೇವಪುರ ಕ್ಷೇತ್ರದಲ್ಲಿ ರಸ್ತೆಗಳು ಹಾಳಾಗಿ ತೊಂದರೆ ಇರುವುದು ನಿಜ. ಹಾಗೆಂದ ಮಾತ್ರಕ್ಕೆ 4ಜಿ ವಿನಾಯಿತಿ ಪಡೆದು ಕಾಮಗಾರಿ ನಡೆಸುವುದು ಒಳ್ಳೆಯ ಸಂಪ್ರದಾಯ ಅಲ್ಲ’ ಎಂಬುದು ಅವರ ಅಭಿಪ್ರಾಯ.</p>.<p>ಈ ಕುರಿತು ಪ್ರತಿಕ್ರಿಯೆ ಪಡೆಯಲು ಶಾಸಕ ಅರವಿಂದ ಲಿಂಬಾವಳಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ‘ಶಾಸಕರು ಬ್ಯುಸಿ ಇದ್ದು, ಪ್ರತಿಕ್ರಿಯೆಗೆ ಗುರುವಾರ ಸಿಗಲಿದ್ದಾರೆ’ ಎಂದು ಅವರ ಆಪ್ತ ಸಿಬ್ಬಂದಿ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಬಿಎಂಪಿಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿ ಯೋಜನೆಯಡಿ ರಸ್ತೆ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿಯಾಗಿ ₹119.62 ಕೋಟಿ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಕಾಮಗಾರಿಗಳಿಗೆ 4ಜಿ ವಿನಾಯಿತಿಯನ್ನೂ (ಟೆಂಡರ್ ಕರೆಯದೇ ಕಾಮಗಾರಿ ನಿರ್ವಹಿಸುವುದು) ಕೋರಿರುವುದು ಚರ್ಚೆಗೆ ಗ್ರಾಸವಾಗಿದೆ.</p>.<p>ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರವೇ ಅತೀ ಹೆಚ್ಚು 31 ಹಳ್ಳಿಗಳನ್ನು ಒಳಗೊಂಡಿದೆ. ಪ್ರಸಕ್ತ ಸಾಲಿನಲ್ಲಿ 110 ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ₹1 ಸಾವಿರ ಕೋಟಿ ಬಿಡುಗಡೆ ಮಾಡಿದ ಸರ್ಕಾರ, ಈ ಕ್ಷೇತ್ರಕ್ಕೆ ₹210 ಕೋಟಿ ಬಿಡುಗಡೆ ಮಾಡಿತು. ಈ ಅನುದಾನದಲ್ಲಿ 114 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಕೂಡ ಅಂತಿಮ ಹಂತದಲ್ಲಿದೆ.</p>.<p>ಐ.ಟಿ ಕಂಪನಿಗಳ ಬೀಡಾಗಿರುವ ಈ ಕ್ಷೇತ್ರದಲ್ಲಿ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, 110 ಹಳ್ಳಿ ಯೋಜನೆಯಡಿ ಪೈಪ್ಲೈನ್ ಅಳವಡಿಕೆಗೆ ಅಗೆದಿರುವ ರಸ್ತೆಗಳ ಮರು ನಿರ್ಮಾಣ ಕಾಮಗಾರಿ ಜರೂರಾಗಿ ಆಗಬೇಕಿದೆ. ಹೆಚ್ಚುವರಿಯಾಗಿ ₹78.32 ಕೋಟಿ ಮತ್ತು ₹41.30 ಕೋಟಿ ಅನುದಾನ ಕೋರಿ ಎರಡು ಪ್ರಸ್ತಾವನೆಗಳನ್ನು ಬಿಬಿಎಂಪಿ ಮಹದೇವಪುರ ವಲಯದಿಂದ ಸಲ್ಲಿಸಲಾಗಿದೆ.</p>.<p>₹78.32 ಕೋಟಿ ಮೊತ್ತದ ಮೊದಲ ಪ್ರಸ್ತಾವನೆಯಲ್ಲಿ ಕಾಡುಗೋಡಿ, ಹಗದೂರು, ದೊಡ್ಡನೆಕ್ಕುಂದಿ, ಬೆಳ್ಳಂದೂರು, ಹೂಡಿ ಮತ್ತು ವರ್ತೂರು ವಾರ್ಡ್ಗಳಲ್ಲಿ ಒಟ್ಟು 73 ಕಾಮಗಾರಿಗಳನ್ನು ಪಟ್ಟಿ ಮಾಡಲಾಗಿದೆ. ₹41.30 ಕೋಟಿ ಮೊತ್ತದ ಎರಡನೇ ಪ್ರಸ್ತಾವನೆಯಲ್ಲಿ ಹೂಡಿ, ಕಾಡುಗೋಡಿ, ಹಗದೂರು, ವರ್ತೂರು, ಬೆಳ್ಳಂದೂರು ವಾರ್ಡ್ ವ್ಯಾಪ್ತಿಯಲ್ಲಿ 59 ಕಾಮಗಾರಿಗಳನ್ನು ಪಟ್ಟಿ ಮಾಡಲಾಗಿದೆ.</p>.<p>ಬಿಬಿಎಂಪಿ ಮುಖ್ಯ ಆಯುಕ್ತರ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಅನುಮೋದನೆಗೆ ಬಾಕಿ ಇದೆ. ಈ ಹೆಚ್ಚುವರಿ ಅನುದಾನದಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕಿದೆ ಎಂಬ ಕಾರಣಕ್ಕೆ 4ಜಿ ವಿನಾಯಿತಿ ಪಡೆಯುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.</p>.<p>ವಾಹನ ದಟ್ಟಣೆ ಹೆಚ್ಚಿರುವುದರಿಂದ ಮುಂಗಾರು ಪೂರ್ವ ಮಳೆ ಆರಂಭಕ್ಕೂ ಮುನ್ನವೇ ಕಾಮಗಾರಿ ಮುಗಿಸಬೇಕಿದೆ. ಟೆಂಡರ್ ಪ್ರಕ್ರಿಯೆ ನಡೆಸಿದರೆ ಕಾಮಗಾರಿ ವಿಳಂಬವಾಗಲಿದ್ದು, 4ಜಿ ವಿನಾಯಿತಿ ನೀಡಬೇಕು ಎಂಬ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಡಲಾಗಿದೆ.</p>.<p>‘4ಜಿ ವಿನಾಯಿತಿ ಪಡೆದು ಬಿಬಿಎಂಪಿ ಚುನಾವಣೆಗೂ ಮುನ್ನ ತಮ್ಮ ಹಿಂಬಾಲಕರಿಗೆ ತುಂಡು ಗುತ್ತಿಗೆ ಕೊಡಿಸುವ ಉದ್ದೇಶವನ್ನು ಸ್ಥಳೀಯ ಜನಪ್ರತಿನಿಧಿಯೊಬ್ಬರು ಹೊಂದಿದ್ದಾರೆ’ ಎಂದು ಬಿಬಿಎಂಪಿ ಎಂಜಿನಿಯರ್ಗಳೇ ಹೇಳುತ್ತಾರೆ.</p>.<p>‘ಮಹದೇವಪುರ ಕ್ಷೇತ್ರದಲ್ಲಿ ರಸ್ತೆಗಳು ಹಾಳಾಗಿ ತೊಂದರೆ ಇರುವುದು ನಿಜ. ಹಾಗೆಂದ ಮಾತ್ರಕ್ಕೆ 4ಜಿ ವಿನಾಯಿತಿ ಪಡೆದು ಕಾಮಗಾರಿ ನಡೆಸುವುದು ಒಳ್ಳೆಯ ಸಂಪ್ರದಾಯ ಅಲ್ಲ’ ಎಂಬುದು ಅವರ ಅಭಿಪ್ರಾಯ.</p>.<p>ಈ ಕುರಿತು ಪ್ರತಿಕ್ರಿಯೆ ಪಡೆಯಲು ಶಾಸಕ ಅರವಿಂದ ಲಿಂಬಾವಳಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ‘ಶಾಸಕರು ಬ್ಯುಸಿ ಇದ್ದು, ಪ್ರತಿಕ್ರಿಯೆಗೆ ಗುರುವಾರ ಸಿಗಲಿದ್ದಾರೆ’ ಎಂದು ಅವರ ಆಪ್ತ ಸಿಬ್ಬಂದಿ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>