‘ಕೊಡಗಿ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯನ್ನು ₹20 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುವುದು’ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಬಿ.ಕೃಷ್ಣಯ್ಯ, ‘ಕೃಷಿ ಭವನದಲ್ಲಿ ಕೃಷಿಗೆ ಸಂಬಂಧಿಸಿ ಎಲ್ಲ ವಿಭಾಗಗಳು ಕಾರ್ಯನಿರ್ವಹಿಸಲಿವೆ. ಹೆಸರಘಟ್ಟ ಹೋಬಳಿಯ ಎಂಟು ಗ್ರಾಮ ಪಂಚಾಯಿತಿಗಳು ಇದರ ವ್ಯಾಪ್ತಿಗೆ ಒಳಪಡುತ್ತವೆ. ಕೃಷಿಕರು ಪ್ರತಿಯೊಂದಕ್ಕೂ ಯಲಹಂಕಕ್ಕೆ ಅಲೆದಾಡುವುದು ತಪ್ಪುತ್ತದೆ’ ಎಂದರು.