<p><strong>ಬೆಂಗಳೂರು:</strong> ಬಿಬಿಎಂಪಿ ಕೇಂದ್ರ ಕಚೇರಿ ಅವರಣದಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ಅಮ್ಮನವರ ದೇವಸ್ಥಾನದ ನವೀಕರಣಕ್ಕೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ₹50 ಲಕ್ಷ ಧನಸಹಾಯ ನೀಡಲಾಯಿತು.</p>.<p>ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸಂಘದ ವತಿಯಿಂದ ₹50 ಲಕ್ಷದ ಚೆಕ್ ಅನ್ನು ದೇವಸ್ಥಾನದ ಆಡಳಿತ ಮಂಡಳಿ, ಅರ್ಚಕರಿಗೆ ಸೋಮವಾರ ಹಸ್ತಾಂತರಿಸಿದರು.</p>.<p>‘ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ನಡುವೆ ಸಾಮರಸ್ಯ ಇರಬೇಕು. ದೇವಸ್ಥಾನದ ನವೀಕರಣದಂತಹ ಕಾಮಗಾರಿಗಳಿಗೆ ನೌಕರರು ಧನಸಹಾಯ ಮಾಡಿರುವುದು ಶ್ಲಾಘನಾರ್ಹ’ ಎಂದು ತುಷಾರ್ ಗಿರಿನಾಥ್ ಹೇಳಿದರು.</p>.<p>‘ಇತಿಹಾಸ ಪ್ರಸಿದ್ಧವಾಗಿರುವ ನೂರಾರು ವರ್ಷದ ದೇವಸ್ಥಾನದ ನವೀಕರಣ ಕಾಮಗಾರಿ ಆರ್ಥಿಕ ಕೊರತೆಯಿಂದ ಕುಂಠಿತಗೊಂಡಿತ್ತು. ಸಂಘದ ಸದಸ್ಯರು ಹಾಗೂ ನೌಕರರಿಂದ ವಂತಿಗೆ ಸಂಗ್ರಹಿಸಿ ಹಣವನ್ನು ನೀಡಲಾಯಿತು’ ಎಂದು ಸಂಘದ ಅಧ್ಯಕ್ಷ ಎ. ಅಮೃತ್ರಾಜ್ ತಿಳಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಕೆ.ಜಿ. ರವಿ, ಎಸ್.ಜಿ. ಸುರೇಶ್, ರಾಮಚಂದ್ರ, ಮಂಜೇಗೌಡ, ಎಚ್.ಬಿ. ಹರೀಶ್, ಮಾರ್ಕೆಟ್ ಮಂಜುನಾಥ್, ಶ್ರೀಧರ್, ಮಂಜುನಾಥ್, ಕೆ. ನರಸಿಂಹ, ಎನ್. ಶಿವಪ್ರಸಾದ್, ಎನ್.ಹರೀಶ್ ಕುಮಾರ್ ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಕೇಂದ್ರ ಕಚೇರಿ ಅವರಣದಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ಅಮ್ಮನವರ ದೇವಸ್ಥಾನದ ನವೀಕರಣಕ್ಕೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ₹50 ಲಕ್ಷ ಧನಸಹಾಯ ನೀಡಲಾಯಿತು.</p>.<p>ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸಂಘದ ವತಿಯಿಂದ ₹50 ಲಕ್ಷದ ಚೆಕ್ ಅನ್ನು ದೇವಸ್ಥಾನದ ಆಡಳಿತ ಮಂಡಳಿ, ಅರ್ಚಕರಿಗೆ ಸೋಮವಾರ ಹಸ್ತಾಂತರಿಸಿದರು.</p>.<p>‘ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ನಡುವೆ ಸಾಮರಸ್ಯ ಇರಬೇಕು. ದೇವಸ್ಥಾನದ ನವೀಕರಣದಂತಹ ಕಾಮಗಾರಿಗಳಿಗೆ ನೌಕರರು ಧನಸಹಾಯ ಮಾಡಿರುವುದು ಶ್ಲಾಘನಾರ್ಹ’ ಎಂದು ತುಷಾರ್ ಗಿರಿನಾಥ್ ಹೇಳಿದರು.</p>.<p>‘ಇತಿಹಾಸ ಪ್ರಸಿದ್ಧವಾಗಿರುವ ನೂರಾರು ವರ್ಷದ ದೇವಸ್ಥಾನದ ನವೀಕರಣ ಕಾಮಗಾರಿ ಆರ್ಥಿಕ ಕೊರತೆಯಿಂದ ಕುಂಠಿತಗೊಂಡಿತ್ತು. ಸಂಘದ ಸದಸ್ಯರು ಹಾಗೂ ನೌಕರರಿಂದ ವಂತಿಗೆ ಸಂಗ್ರಹಿಸಿ ಹಣವನ್ನು ನೀಡಲಾಯಿತು’ ಎಂದು ಸಂಘದ ಅಧ್ಯಕ್ಷ ಎ. ಅಮೃತ್ರಾಜ್ ತಿಳಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಕೆ.ಜಿ. ರವಿ, ಎಸ್.ಜಿ. ಸುರೇಶ್, ರಾಮಚಂದ್ರ, ಮಂಜೇಗೌಡ, ಎಚ್.ಬಿ. ಹರೀಶ್, ಮಾರ್ಕೆಟ್ ಮಂಜುನಾಥ್, ಶ್ರೀಧರ್, ಮಂಜುನಾಥ್, ಕೆ. ನರಸಿಂಹ, ಎನ್. ಶಿವಪ್ರಸಾದ್, ಎನ್.ಹರೀಶ್ ಕುಮಾರ್ ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>