<p><strong>ಬೆಂಗಳೂರು:</strong> ಕೆಲಸ ಕೊಡಿಸುವ ಆಮಿಷವೊಡ್ಡಿ ಅರ್ಜಿ ಹಾಕಿಸಿದ್ದ ವ್ಯಕ್ತಿಯೊಬ್ಬರು, ಹಣ ಹೂಡಿಕೆ ಹೆಸರಿನಲ್ಲಿ ₹ 50 ಲಕ್ಷ ಪಡೆದು ವಂಚಿಸಿದ್ದಾರೆ. ಈ ಸಂಬಂಧ ವೈಟ್ಫೀಲ್ಡ್ ಉಪವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಂಚನೆ ಸಂಬಂಧ ವರ್ತೂರು ನಿವಾಸಿ ಲಾಲ್ ವಾಸ್ವಾನ್ ಎಂಬುವರು ದೂರು ನೀಡಿದ್ದಾರೆ. ಆರೋಪಿಗಳಾದ ಉಮೇಶ್, ನೆಹರೂ ಸಿಂಗ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ವಾಸ್ವಾನ್ ಅವರಿಗೆ ಆರೋಪಿ ನೆಹರೂ ಸಿಂಗ್ ಪರಿಚಯವಾಗಿತ್ತು. ಆನ್ಲೈನ್ ಮೂಲಕ ₹ 1,000 ಶುಲ್ಕ ಸಮೇತ ಕಂಪನಿಯೊಂದರಲ್ಲಿ ಕೆಲಸಕ್ಕೆ ಅರ್ಜಿ ಹಾಕಿಸಿದ್ದ ನೆಹರೂ ಸಿಂಗ್, ನಿರಂತರವಾಗಿ ಒಡನಾಟ ಇಟ್ಟುಕೊಂಡಿದ್ದರು. ಕೆಲಸ ಮಾಡುವ ಬದಲು ಹಣ ಹೂಡಿಕೆ ಮಾಡಿದರೆ, ಹೆಚ್ಚಿನ ಲಾಭ ಸಿಗುವುದಾಗಿ ನೆಹರೂ ಸಿಂಗ್ ಹೇಳಿದ್ದರು. ಉಮೇಶ್ ಹಾಗೂ ಇತರೆ ಆರೋಪಿಗಳನ್ನು ಪರಿಚಯ ಮಾಡಿಸಿದ್ದರು.’</p>.<p>‘ಹಣ ಹೂಡಿಕೆ ಮಾಡಿದರೆ, ಪ್ರತಿ ತಿಂಗಳು ಕಂತಿನ ರೂಪದಲ್ಲಿ ಲಾಭದ ಹಣ ನೀಡುವುದಾಗಿ ಉಮೇಶ್ ಹಾಗೂ ಇತರೆ ಆರೋಪಿಗಳು ಹೇಳಿದ್ದರು. ಅವರ ಮಾತು ನಂಬಿದ್ದ ವಾಸ್ವಾನ್, ಆರೋಪಿಗಳು ಹೇಳಿದ್ದ ಬ್ಯಾಂಕ್ ಖಾತೆಗೆ ₹ 50 ಲಕ್ಷ ಜಮೆ ಮಾಡಿದ್ದರು. ಎರಡು ಬಾರಿ ಮಾತ್ರ ಆರೋಪಿಗಳು ಲಾಭದ ಹಣ ನೀಡಿದ್ದರು. ನಂತರ, ಹಣ ನೀಡದೇ ತಲೆಮರೆಸಿಕೊಂಡಿದ್ದಾರೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಲಸ ಕೊಡಿಸುವ ಆಮಿಷವೊಡ್ಡಿ ಅರ್ಜಿ ಹಾಕಿಸಿದ್ದ ವ್ಯಕ್ತಿಯೊಬ್ಬರು, ಹಣ ಹೂಡಿಕೆ ಹೆಸರಿನಲ್ಲಿ ₹ 50 ಲಕ್ಷ ಪಡೆದು ವಂಚಿಸಿದ್ದಾರೆ. ಈ ಸಂಬಂಧ ವೈಟ್ಫೀಲ್ಡ್ ಉಪವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ವಂಚನೆ ಸಂಬಂಧ ವರ್ತೂರು ನಿವಾಸಿ ಲಾಲ್ ವಾಸ್ವಾನ್ ಎಂಬುವರು ದೂರು ನೀಡಿದ್ದಾರೆ. ಆರೋಪಿಗಳಾದ ಉಮೇಶ್, ನೆಹರೂ ಸಿಂಗ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ವಾಸ್ವಾನ್ ಅವರಿಗೆ ಆರೋಪಿ ನೆಹರೂ ಸಿಂಗ್ ಪರಿಚಯವಾಗಿತ್ತು. ಆನ್ಲೈನ್ ಮೂಲಕ ₹ 1,000 ಶುಲ್ಕ ಸಮೇತ ಕಂಪನಿಯೊಂದರಲ್ಲಿ ಕೆಲಸಕ್ಕೆ ಅರ್ಜಿ ಹಾಕಿಸಿದ್ದ ನೆಹರೂ ಸಿಂಗ್, ನಿರಂತರವಾಗಿ ಒಡನಾಟ ಇಟ್ಟುಕೊಂಡಿದ್ದರು. ಕೆಲಸ ಮಾಡುವ ಬದಲು ಹಣ ಹೂಡಿಕೆ ಮಾಡಿದರೆ, ಹೆಚ್ಚಿನ ಲಾಭ ಸಿಗುವುದಾಗಿ ನೆಹರೂ ಸಿಂಗ್ ಹೇಳಿದ್ದರು. ಉಮೇಶ್ ಹಾಗೂ ಇತರೆ ಆರೋಪಿಗಳನ್ನು ಪರಿಚಯ ಮಾಡಿಸಿದ್ದರು.’</p>.<p>‘ಹಣ ಹೂಡಿಕೆ ಮಾಡಿದರೆ, ಪ್ರತಿ ತಿಂಗಳು ಕಂತಿನ ರೂಪದಲ್ಲಿ ಲಾಭದ ಹಣ ನೀಡುವುದಾಗಿ ಉಮೇಶ್ ಹಾಗೂ ಇತರೆ ಆರೋಪಿಗಳು ಹೇಳಿದ್ದರು. ಅವರ ಮಾತು ನಂಬಿದ್ದ ವಾಸ್ವಾನ್, ಆರೋಪಿಗಳು ಹೇಳಿದ್ದ ಬ್ಯಾಂಕ್ ಖಾತೆಗೆ ₹ 50 ಲಕ್ಷ ಜಮೆ ಮಾಡಿದ್ದರು. ಎರಡು ಬಾರಿ ಮಾತ್ರ ಆರೋಪಿಗಳು ಲಾಭದ ಹಣ ನೀಡಿದ್ದರು. ನಂತರ, ಹಣ ನೀಡದೇ ತಲೆಮರೆಸಿಕೊಂಡಿದ್ದಾರೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>