ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸಕ್ಕೆ ಅರ್ಜಿ; ಹೂಡಿಕೆ ಹೆಸರಿನಲ್ಲಿ ₹ 50 ಲಕ್ಷ ವಂಚನೆ

Last Updated 15 ಡಿಸೆಂಬರ್ 2020, 16:17 IST
ಅಕ್ಷರ ಗಾತ್ರ

ಬೆಂಗಳೂರು: ಕೆಲಸ ಕೊಡಿಸುವ ಆಮಿಷವೊಡ್ಡಿ ಅರ್ಜಿ ಹಾಕಿಸಿದ್ದ ವ್ಯಕ್ತಿಯೊಬ್ಬರು, ಹಣ ಹೂಡಿಕೆ ಹೆಸರಿನಲ್ಲಿ ₹ 50 ಲಕ್ಷ ಪಡೆದು ವಂಚಿಸಿದ್ದಾರೆ. ಈ ಸಂಬಂಧ ವೈಟ್‌ಫೀಲ್ಡ್ ಉಪವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಂಚನೆ ಸಂಬಂಧ ವರ್ತೂರು ನಿವಾಸಿ ಲಾಲ್ ವಾಸ್ವಾನ್ ಎಂಬುವರು ದೂರು ನೀಡಿದ್ದಾರೆ. ಆರೋಪಿಗಳಾದ ಉಮೇಶ್, ನೆಹರೂ ಸಿಂಗ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ವಾಸ್ವಾನ್ ಅವರಿಗೆ ಆರೋಪಿ ನೆಹರೂ ಸಿಂಗ್ ಪರಿಚಯವಾಗಿತ್ತು. ಆನ್‌ಲೈನ್‌ ಮೂಲಕ ₹ 1,000 ಶುಲ್ಕ ಸಮೇತ ಕಂಪನಿಯೊಂದರಲ್ಲಿ ಕೆಲಸಕ್ಕೆ ಅರ್ಜಿ ಹಾಕಿಸಿದ್ದ ನೆಹರೂ ಸಿಂಗ್, ನಿರಂತರವಾಗಿ ಒಡನಾಟ ಇಟ್ಟುಕೊಂಡಿದ್ದರು. ಕೆಲಸ ಮಾಡುವ ಬದಲು ಹಣ ಹೂಡಿಕೆ ಮಾಡಿದರೆ, ಹೆಚ್ಚಿನ ಲಾಭ ಸಿಗುವುದಾಗಿ ನೆಹರೂ ಸಿಂಗ್ ಹೇಳಿದ್ದರು. ಉಮೇಶ್ ಹಾಗೂ ಇತರೆ ಆರೋಪಿಗಳನ್ನು ಪರಿಚಯ ಮಾಡಿಸಿದ್ದರು.’

‘ಹಣ ಹೂಡಿಕೆ ಮಾಡಿದರೆ, ಪ್ರತಿ ತಿಂಗಳು ಕಂತಿನ ರೂಪದಲ್ಲಿ ಲಾಭದ ಹಣ ನೀಡುವುದಾಗಿ ಉಮೇಶ್ ಹಾಗೂ ಇತರೆ ಆರೋಪಿಗಳು ಹೇಳಿದ್ದರು. ಅವರ ಮಾತು ನಂಬಿದ್ದ ವಾಸ್ವಾನ್, ಆರೋಪಿಗಳು ಹೇಳಿದ್ದ ಬ್ಯಾಂಕ್ ಖಾತೆಗೆ ₹ 50 ಲಕ್ಷ ಜಮೆ ಮಾಡಿದ್ದರು. ಎರಡು ಬಾರಿ ಮಾತ್ರ ಆರೋಪಿಗಳು ಲಾಭದ ಹಣ ನೀಡಿದ್ದರು. ನಂತರ, ಹಣ ನೀಡದೇ ತಲೆಮರೆಸಿಕೊಂಡಿದ್ದಾರೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT