<p><strong>ಬೆಂಗಳೂರು:</strong> ನಾಡಪ್ರಭು ಕೆಂಪೇಗೌಡ ಬಡಾವಣೆಯ 5,000 ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಿದ್ಧತೆ ನಡೆಸಿದೆ. ಈ ಕುರಿತು ವಾರದೊಳಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.</p>.<p>‘ಬಡಾವಣೆಯಲ್ಲಿ ಒಟ್ಟು 5,000 ನಿವೇಶನಗಳನ್ನು ನಾಗರಿಕರಿಗೆ ಹಂಚಿಕೆ ಮಾಡುತ್ತೇವೆ. ಈ ಬಡಾವಣೆಗಾಗಿ ಜಾಗ ನೀಡಿದ ರೈತರಿಗೆ ಅಭಿವೃದ್ಧಿಪಡಿಸಿದ 2500 ನಿವೇಶನಗಳನ್ನು ನೀಡುತ್ತೇವೆ. ಶೀಘ್ರವೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಿದ್ದೇವೆ’ ಎಂದು ಬಿಡಿಎ ಅಧ್ಯಕ್ಷ ಕೆ.ವೆಂಕಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಬಡಾವಣೆಯಲ್ಲಿ ಮೊದಲ ಹಂತದಲ್ಲಿ ನಿವೇಶನ ಹಂಚಿಕೆ ಮಾಡಲು 2015ರ ನ.1ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಒಟ್ಟು 31,369 ಮಂದಿ ಅರ್ಜಿ ಸಲ್ಲಿಸಿದ್ದರು. 5,000 ಮಂದಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಬಡಾವಣೆಗೆ ಜಾಗ ಬಿಟ್ಟುಕೊಟ್ಟ ರೈತರಿಗೆ ಒಟ್ಟು 2,174 ಅಭಿವೃದ್ಧಿ ಪಡಿಸಿದ ನಿವೇಶನಗಳನ್ನು ನೀಡಲಾಗಿತ್ತು.</p>.<p>ಮೊದಲ ಹಂತದ ನಿವೇಶನ ಹಂಚಿಕೆ ಪ್ರಕ್ರಿಯೆ ಪುರ್ಣಗೊಂಡು ಒಂದು ವರ್ಷ ಕಳೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 2016ರ ನವೆಂಬರ್ 9ರಂದು ಅರ್ಹ ಫಲಾನುಭವಿಗಳಿಗೆ ಕಂಪ್ಯೂಟರ್ ರ್ಯಾಂಡಮೈಸೇಷನ್ ಮೂಲಕ ನಿವೇಶನ ಸಂಖ್ಯೆ ನಿಗದಿ ಮಾಡಿದ್ದರು.</p>.<p>ಈ ಬಡಾವಣೆಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಮೂಲಸೌಕರ್ಯ ಕಲ್ಪಿಸಿಲ್ಲ. ಮೂಲಸೌಕರ್ಯ ಇಲ್ಲದ ಕಾರಣ ಇಲ್ಲಿ ಮನೆ ಕಟ್ಟಲು ಆಗುತ್ತಿಲ್ಲ ಎಂದು ಇಲ್ಲಿ ನಿವೇಶನ ಪಡೆದವರು ದೂರಿದ್ದಾರೆ.</p>.<p>‘ಈ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗೆ ಟೆಂಡರ್ ಕರೆದಿದ್ದೇವೆ. ಶೀಘ್ರವೇ ಕಾಮಗಾರಿ ಆರಂಭವಾಗಲಿದೆ’ ಎಂದು ಅಧ್ಯಕ್ಷರು ತಿಳಿಸಿದರು.</p>.<p>‘ಈ ಬಡಾವಣೆಗೆ ನೀರು ಪೂರೈಕೆ, ಒಳಚರಂಡಿ, ವಿದ್ಯುತ್ ಪೂರೈಕೆ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ ಕಾರ್ಯಾದೇಶ ನೀಡುವುದು ಬಾಕಿ ಇದೆ. ಮೂಲಸೌಕರ್ಯ ಕಲ್ಪಿಸುವ ಕಾರ್ಯ ಶೀಘ್ರವೇ ಆರಂಭವಾಗಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಶುಲ್ಕ ಇಳಿಕೆ ಪ್ರಸ್ತಾವ ಇಲ್ಲ</strong><br /> ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದಲ್ಲಿ ನಿವೇಶನ ಪಡೆದ 400ಕ್ಕೂ ಹೆಚ್ಚು ಮಂದಿ ಶುಲ್ಕವನ್ನು ಭರಿಸಲಾಗದೆ ಅದನ್ನು ಬಿಡಿಎಗೆ ಹಿಂತಿರುಗಿಸಿದ್ದರು.</p>.<p>ಇಲ್ಲಿ 600 ಚದರ ಅಡಿ ವಿಸ್ತೀರ್ಣದ ನಿವೇಶನಗಳಿಗೆ ಸಾಮಾನ್ಯ ವರ್ಗದವರಿಗೆ ₹ 10.46 ಲಕ್ಷ, 1,200 ಚದರ ಅಡಿ ವಿಸ್ತೀರ್ಣದ ನಿವೇಶನಗಳಿಗೆ ₹ 23.25 ಲಕ್ಷ, 2,400 ಚದರ ಅಡಿ ವಿಸ್ತೀರ್ಣದ ನಿವೇಶನಗಳಿಗೆ ₹ 52.31 ಲಕ್ಷ ಹಾಗೂ 4,000 ಚದರ ಅಡಿ ವಿಸ್ತೀರ್ಣದ ನಿವೇಶನಗಳಿಗೆ 96.87 ಲಕ್ಷ ಶುಲ್ಕ ನಿಗದಿಪಡಿಸಲಾಗಿತ್ತು. ಈ ಶುಲ್ಕವನ್ನು ಕಡಿಮೆ ಮಾಡಬೇಕು ಎಂಬ ಒತ್ತಾಯವೂ ಕೇಳಿಬಂದಿತ್ತು.</p>.<p>‘ಕೆಲವರು ಹಂಚಿಕೆಯಾದ ನಿವೇಶನವನ್ನು ಹಿಂತಿರುಗಿಸಿದ್ದು ನಿಜ. ಆದರೆ, ಸದ್ಯಕ್ಕೆ ನಿವೇಶನಗಳ ಶುಲ್ಕ ಕಡಿಮೆ ಮಾಡುವ ಪ್ರಸ್ತಾವ ಪ್ರಾಧಿಕಾರದ ಮುಂದೆ ಇಲ್ಲ. ಅರ್ಕಾವತಿ ಬಡಾವಣೆಯಲ್ಲಿ ಡಿನೋಟಿಫಿಕೇಷನ್ ಹಾಗೂ ರೀಡು ಪ್ರಕ್ರಿಯೆಯಿಂದಾಗಿ ನಿವೇಶನ ಕಳೆದುಕೊಂಡವರಿಗೆ ಈ ಬಡಾವಣೆಯಲ್ಲಿ ಬದಲಿ ನಿವೇಶನ ಹಂಚಿಕೆ ಮಾಡಿದ್ದೇವೆ. ಬಡಾವಣೆಗೆ ಮೂಲಸೌಕರ್ಯ ಕಲ್ಪಿಸುವುದಕ್ಕೂ ಸಾಕಷ್ಟು ಹಣ ಬೇಕಾಗುತ್ತದೆ. ನಿವೇಶನಗಳ ಶುಲ್ಕ ಕಡಿಮೆಗೊಳಿಸಿದರೆ ನಮಗೆ ನಷ್ಟ ಉಂಟಾಗುತ್ತದೆ’ ಎಂದು ವೆಂಕಟೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾಡಪ್ರಭು ಕೆಂಪೇಗೌಡ ಬಡಾವಣೆಯ 5,000 ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಿದ್ಧತೆ ನಡೆಸಿದೆ. ಈ ಕುರಿತು ವಾರದೊಳಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.</p>.<p>‘ಬಡಾವಣೆಯಲ್ಲಿ ಒಟ್ಟು 5,000 ನಿವೇಶನಗಳನ್ನು ನಾಗರಿಕರಿಗೆ ಹಂಚಿಕೆ ಮಾಡುತ್ತೇವೆ. ಈ ಬಡಾವಣೆಗಾಗಿ ಜಾಗ ನೀಡಿದ ರೈತರಿಗೆ ಅಭಿವೃದ್ಧಿಪಡಿಸಿದ 2500 ನಿವೇಶನಗಳನ್ನು ನೀಡುತ್ತೇವೆ. ಶೀಘ್ರವೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಿದ್ದೇವೆ’ ಎಂದು ಬಿಡಿಎ ಅಧ್ಯಕ್ಷ ಕೆ.ವೆಂಕಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಬಡಾವಣೆಯಲ್ಲಿ ಮೊದಲ ಹಂತದಲ್ಲಿ ನಿವೇಶನ ಹಂಚಿಕೆ ಮಾಡಲು 2015ರ ನ.1ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಒಟ್ಟು 31,369 ಮಂದಿ ಅರ್ಜಿ ಸಲ್ಲಿಸಿದ್ದರು. 5,000 ಮಂದಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಬಡಾವಣೆಗೆ ಜಾಗ ಬಿಟ್ಟುಕೊಟ್ಟ ರೈತರಿಗೆ ಒಟ್ಟು 2,174 ಅಭಿವೃದ್ಧಿ ಪಡಿಸಿದ ನಿವೇಶನಗಳನ್ನು ನೀಡಲಾಗಿತ್ತು.</p>.<p>ಮೊದಲ ಹಂತದ ನಿವೇಶನ ಹಂಚಿಕೆ ಪ್ರಕ್ರಿಯೆ ಪುರ್ಣಗೊಂಡು ಒಂದು ವರ್ಷ ಕಳೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 2016ರ ನವೆಂಬರ್ 9ರಂದು ಅರ್ಹ ಫಲಾನುಭವಿಗಳಿಗೆ ಕಂಪ್ಯೂಟರ್ ರ್ಯಾಂಡಮೈಸೇಷನ್ ಮೂಲಕ ನಿವೇಶನ ಸಂಖ್ಯೆ ನಿಗದಿ ಮಾಡಿದ್ದರು.</p>.<p>ಈ ಬಡಾವಣೆಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಮೂಲಸೌಕರ್ಯ ಕಲ್ಪಿಸಿಲ್ಲ. ಮೂಲಸೌಕರ್ಯ ಇಲ್ಲದ ಕಾರಣ ಇಲ್ಲಿ ಮನೆ ಕಟ್ಟಲು ಆಗುತ್ತಿಲ್ಲ ಎಂದು ಇಲ್ಲಿ ನಿವೇಶನ ಪಡೆದವರು ದೂರಿದ್ದಾರೆ.</p>.<p>‘ಈ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗೆ ಟೆಂಡರ್ ಕರೆದಿದ್ದೇವೆ. ಶೀಘ್ರವೇ ಕಾಮಗಾರಿ ಆರಂಭವಾಗಲಿದೆ’ ಎಂದು ಅಧ್ಯಕ್ಷರು ತಿಳಿಸಿದರು.</p>.<p>‘ಈ ಬಡಾವಣೆಗೆ ನೀರು ಪೂರೈಕೆ, ಒಳಚರಂಡಿ, ವಿದ್ಯುತ್ ಪೂರೈಕೆ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ ಕಾರ್ಯಾದೇಶ ನೀಡುವುದು ಬಾಕಿ ಇದೆ. ಮೂಲಸೌಕರ್ಯ ಕಲ್ಪಿಸುವ ಕಾರ್ಯ ಶೀಘ್ರವೇ ಆರಂಭವಾಗಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಶುಲ್ಕ ಇಳಿಕೆ ಪ್ರಸ್ತಾವ ಇಲ್ಲ</strong><br /> ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದಲ್ಲಿ ನಿವೇಶನ ಪಡೆದ 400ಕ್ಕೂ ಹೆಚ್ಚು ಮಂದಿ ಶುಲ್ಕವನ್ನು ಭರಿಸಲಾಗದೆ ಅದನ್ನು ಬಿಡಿಎಗೆ ಹಿಂತಿರುಗಿಸಿದ್ದರು.</p>.<p>ಇಲ್ಲಿ 600 ಚದರ ಅಡಿ ವಿಸ್ತೀರ್ಣದ ನಿವೇಶನಗಳಿಗೆ ಸಾಮಾನ್ಯ ವರ್ಗದವರಿಗೆ ₹ 10.46 ಲಕ್ಷ, 1,200 ಚದರ ಅಡಿ ವಿಸ್ತೀರ್ಣದ ನಿವೇಶನಗಳಿಗೆ ₹ 23.25 ಲಕ್ಷ, 2,400 ಚದರ ಅಡಿ ವಿಸ್ತೀರ್ಣದ ನಿವೇಶನಗಳಿಗೆ ₹ 52.31 ಲಕ್ಷ ಹಾಗೂ 4,000 ಚದರ ಅಡಿ ವಿಸ್ತೀರ್ಣದ ನಿವೇಶನಗಳಿಗೆ 96.87 ಲಕ್ಷ ಶುಲ್ಕ ನಿಗದಿಪಡಿಸಲಾಗಿತ್ತು. ಈ ಶುಲ್ಕವನ್ನು ಕಡಿಮೆ ಮಾಡಬೇಕು ಎಂಬ ಒತ್ತಾಯವೂ ಕೇಳಿಬಂದಿತ್ತು.</p>.<p>‘ಕೆಲವರು ಹಂಚಿಕೆಯಾದ ನಿವೇಶನವನ್ನು ಹಿಂತಿರುಗಿಸಿದ್ದು ನಿಜ. ಆದರೆ, ಸದ್ಯಕ್ಕೆ ನಿವೇಶನಗಳ ಶುಲ್ಕ ಕಡಿಮೆ ಮಾಡುವ ಪ್ರಸ್ತಾವ ಪ್ರಾಧಿಕಾರದ ಮುಂದೆ ಇಲ್ಲ. ಅರ್ಕಾವತಿ ಬಡಾವಣೆಯಲ್ಲಿ ಡಿನೋಟಿಫಿಕೇಷನ್ ಹಾಗೂ ರೀಡು ಪ್ರಕ್ರಿಯೆಯಿಂದಾಗಿ ನಿವೇಶನ ಕಳೆದುಕೊಂಡವರಿಗೆ ಈ ಬಡಾವಣೆಯಲ್ಲಿ ಬದಲಿ ನಿವೇಶನ ಹಂಚಿಕೆ ಮಾಡಿದ್ದೇವೆ. ಬಡಾವಣೆಗೆ ಮೂಲಸೌಕರ್ಯ ಕಲ್ಪಿಸುವುದಕ್ಕೂ ಸಾಕಷ್ಟು ಹಣ ಬೇಕಾಗುತ್ತದೆ. ನಿವೇಶನಗಳ ಶುಲ್ಕ ಕಡಿಮೆಗೊಳಿಸಿದರೆ ನಮಗೆ ನಷ್ಟ ಉಂಟಾಗುತ್ತದೆ’ ಎಂದು ವೆಂಕಟೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>