<p><strong>ಬೆಂಗಳೂರು: </strong>ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಆರೋಪಿಗಳ ಮೇಲೆ ಹೊರಿಸಿರುವ ಆರೋಪಗಳನ್ನು ಕೈಬಿಡಲು ರಾಷ್ಟ್ರೀಯ ತನಿಖಾ ಸಂಸ್ಥೆಡ (ಎನ್ಐಎ) ವಿಶೇಷ ನ್ಯಾಯಾಲಯ ನಿರಾಕರಿಸಿದೆ.</p>.<p>ಆರೋಪಿಗಳು ಉಗ್ರವಾದಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಆರೋಪಿಸಿ ಎನ್ಐಎ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ಆರೋಪ ಕೈಬಿಡುವಂತೆ ಕೋರಿ ಐದನೇ ಆರೋಪಿ ಅಜೀಂ ಷರೀಫ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಾಲಯ, ಪ್ರಕರಣದ ಇತರ ಆರೋಪಿಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ತಿಳಿಸಿದೆ.</p>.<p>ಎನ್ಐಎ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿರುವ ಸಾಕ್ಷ್ಯಗಳು ಪ್ರಬಲವಾಗಿವೆ. ಹೀಗಾಗಿ ಆರೋಪಿಗಳ ವಾದವನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.</p>.<p>ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ದೂರವಾಣಿ ಸಂಭಾಷಣೆ ವಿವರ, ನಿರ್ದಿಷ್ಠ ಸಂಘಟನೆಯ ಕಾರ್ಯಕರ್ತರಲ್ಲಿ ಭೀತಿ ಮೂಡಿಸಲು ಈ ಹತ್ಯೆ ಮಾಡಿರುವ ಕುರಿತಂತೆ ಸಾಕ್ಷ್ಯಗಳು ಲಭ್ಯವಾಗಿವೆ. ಹೀಗಾಗಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಎನ್ಐಎ ವಕೀಲ ಪಿ. ಪ್ರಸನ್ನಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>2016ರ ಅಕ್ಟೋಬರ್ 16ರಂದು ಶಿವಾಜಿನಗರದ ಕಾಮರಾಜ ರಸ್ತೆಯಲ್ಲಿ ರುದ್ರೇಶ್ ಹತ್ಯೆ ನಡೆದಿತ್ತು. ಎನ್ಐಎ ಅಧಿಕಾರಿಗಳು 2017ರ ಏಪ್ರಿಲ್ 22ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಆರೋಪಿಗಳ ಮೇಲೆ ಹೊರಿಸಿರುವ ಆರೋಪಗಳನ್ನು ಕೈಬಿಡಲು ರಾಷ್ಟ್ರೀಯ ತನಿಖಾ ಸಂಸ್ಥೆಡ (ಎನ್ಐಎ) ವಿಶೇಷ ನ್ಯಾಯಾಲಯ ನಿರಾಕರಿಸಿದೆ.</p>.<p>ಆರೋಪಿಗಳು ಉಗ್ರವಾದಿ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಆರೋಪಿಸಿ ಎನ್ಐಎ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ಆರೋಪ ಕೈಬಿಡುವಂತೆ ಕೋರಿ ಐದನೇ ಆರೋಪಿ ಅಜೀಂ ಷರೀಫ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಾಲಯ, ಪ್ರಕರಣದ ಇತರ ಆರೋಪಿಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ತಿಳಿಸಿದೆ.</p>.<p>ಎನ್ಐಎ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿರುವ ಸಾಕ್ಷ್ಯಗಳು ಪ್ರಬಲವಾಗಿವೆ. ಹೀಗಾಗಿ ಆರೋಪಿಗಳ ವಾದವನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.</p>.<p>ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ದೂರವಾಣಿ ಸಂಭಾಷಣೆ ವಿವರ, ನಿರ್ದಿಷ್ಠ ಸಂಘಟನೆಯ ಕಾರ್ಯಕರ್ತರಲ್ಲಿ ಭೀತಿ ಮೂಡಿಸಲು ಈ ಹತ್ಯೆ ಮಾಡಿರುವ ಕುರಿತಂತೆ ಸಾಕ್ಷ್ಯಗಳು ಲಭ್ಯವಾಗಿವೆ. ಹೀಗಾಗಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಎನ್ಐಎ ವಕೀಲ ಪಿ. ಪ್ರಸನ್ನಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>2016ರ ಅಕ್ಟೋಬರ್ 16ರಂದು ಶಿವಾಜಿನಗರದ ಕಾಮರಾಜ ರಸ್ತೆಯಲ್ಲಿ ರುದ್ರೇಶ್ ಹತ್ಯೆ ನಡೆದಿತ್ತು. ಎನ್ಐಎ ಅಧಿಕಾರಿಗಳು 2017ರ ಏಪ್ರಿಲ್ 22ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>