<p><strong>ಬೆಂಗಳೂರು: </strong>ಕೆಂಗೇರಿಯಿಂದ ಮಾಗಡಿ ರಸ್ತೆ ಸಂಪರ್ಕಿಸುವ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣಕ್ಕೆ ಭೂಮಿ ಕಳೆದುಕೊಳ್ಳುವ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ಭೂಮಿ ಸಿಗಲಿದೆ.</p>.<p>ನೂರು ಅಡಿ ಅಗಲದ ರಸ್ತೆಗಾಗಿ 321 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗುತ್ತದೆ. ಅಭಿವೃದ್ಧಿ ಯೋಜನೆಗಳಿಗಾಗಿ ಭೂಮಿ ಕಳೆದುಕೊಂಡವರಿಗೆ ಇಲ್ಲಿಯವರೆಗೆ ಅಭಿವೃದ್ಧಿ ಪಡಿಸಿದ ಅಥವಾ ಬೇರೆ ಪ್ರದೇಶದಲ್ಲಿ 60:40ರ ಅನುಪಾತ (40 ರಷ್ಟು ರೈತರಿಗೆ) ಸಿಗುತ್ತಿತ್ತು.</p>.<p>ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಅನುಪಾತ ಪ್ರಮಾಣವನ್ನು 50:50ಕ್ಕೆ ಬದಲಾವಣೆ ಮಾಡಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.</p>.<p><strong>ಬಾಡಿಗೆ ಸೈಕಲ್ ಯೋಜನೆ: </strong>ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಬಾಡಿಗೆಗೆ ಸೈಕಲ್ ನೀಡುವ ಯೋಜನೆಗೆ ಮೀಸಲಿಟ್ಟಿದ್ದ ₹80 ಕೋಟಿ ಮೊತ್ತವನ್ನು ಸೈಕಲ್ ಪಾರ್ಕಿಂಗ್ ಹಾಗೂ ಸೈಕಲ್ ಹಬ್ (ಪ್ರತ್ಯೇಕ ಪಥ) ನಿರ್ಮಾಣಕ್ಕೆ ಬಳಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಎಂ.ಜಿ. ರಸ್ತೆ, ವಿಧಾನಸೌಧ, ಕೋರಮಂಗಲ, ಇಂದಿರಾ ನಗರ, ಎಚ್ಎಸ್ಆರ್ ಬಡಾವಣೆ, ಎಚ್ಆರ್ ಬಿಆರ್ ಬಡಾವಣೆ, ಎಚ್ಬಿಆರ್ ಬಡಾವಣೆಗಳಲ್ಲಿ ಈ ಯೋಜನೆ ಮೊದಲ ಹಂತದಲ್ಲಿ ಅನುಷ್ಠಾನಗೊಳ್ಳಲಿದೆ. ಯೋಜನೆಯ ನಿರ್ವಹಣೆ ಹೊಣೆಯನ್ನು ಟೆಂಡರ್ ಮೂಲಕ ಖಾಸಗಿಯವರಿಗೆ ವಹಿಸಲು ಸಭೆ ಒಪ್ಪಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೆಂಗೇರಿಯಿಂದ ಮಾಗಡಿ ರಸ್ತೆ ಸಂಪರ್ಕಿಸುವ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣಕ್ಕೆ ಭೂಮಿ ಕಳೆದುಕೊಳ್ಳುವ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿದ ಭೂಮಿ ಸಿಗಲಿದೆ.</p>.<p>ನೂರು ಅಡಿ ಅಗಲದ ರಸ್ತೆಗಾಗಿ 321 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗುತ್ತದೆ. ಅಭಿವೃದ್ಧಿ ಯೋಜನೆಗಳಿಗಾಗಿ ಭೂಮಿ ಕಳೆದುಕೊಂಡವರಿಗೆ ಇಲ್ಲಿಯವರೆಗೆ ಅಭಿವೃದ್ಧಿ ಪಡಿಸಿದ ಅಥವಾ ಬೇರೆ ಪ್ರದೇಶದಲ್ಲಿ 60:40ರ ಅನುಪಾತ (40 ರಷ್ಟು ರೈತರಿಗೆ) ಸಿಗುತ್ತಿತ್ತು.</p>.<p>ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಅನುಪಾತ ಪ್ರಮಾಣವನ್ನು 50:50ಕ್ಕೆ ಬದಲಾವಣೆ ಮಾಡಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.</p>.<p><strong>ಬಾಡಿಗೆ ಸೈಕಲ್ ಯೋಜನೆ: </strong>ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಬಾಡಿಗೆಗೆ ಸೈಕಲ್ ನೀಡುವ ಯೋಜನೆಗೆ ಮೀಸಲಿಟ್ಟಿದ್ದ ₹80 ಕೋಟಿ ಮೊತ್ತವನ್ನು ಸೈಕಲ್ ಪಾರ್ಕಿಂಗ್ ಹಾಗೂ ಸೈಕಲ್ ಹಬ್ (ಪ್ರತ್ಯೇಕ ಪಥ) ನಿರ್ಮಾಣಕ್ಕೆ ಬಳಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.</p>.<p>ಎಂ.ಜಿ. ರಸ್ತೆ, ವಿಧಾನಸೌಧ, ಕೋರಮಂಗಲ, ಇಂದಿರಾ ನಗರ, ಎಚ್ಎಸ್ಆರ್ ಬಡಾವಣೆ, ಎಚ್ಆರ್ ಬಿಆರ್ ಬಡಾವಣೆ, ಎಚ್ಬಿಆರ್ ಬಡಾವಣೆಗಳಲ್ಲಿ ಈ ಯೋಜನೆ ಮೊದಲ ಹಂತದಲ್ಲಿ ಅನುಷ್ಠಾನಗೊಳ್ಳಲಿದೆ. ಯೋಜನೆಯ ನಿರ್ವಹಣೆ ಹೊಣೆಯನ್ನು ಟೆಂಡರ್ ಮೂಲಕ ಖಾಸಗಿಯವರಿಗೆ ವಹಿಸಲು ಸಭೆ ಒಪ್ಪಿಗೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>