<p><strong>ಬೆಂಗಳೂರು: </strong>ಅಂತರ ನಿಗಮ ವರ್ಗಾವಣೆಗೊಂಡಿರುವ ತಾಂತ್ರಿಕ ಸಿಬ್ಬಂದಿಯನ್ನು ಸದ್ಯಕ್ಕೆ ಬಿಡುಗಡೆ ಮಾಡದಿರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ನಿರ್ಧರಿಸಿದ್ದು, ಇದು ನೌಕರರ ಅಸಮಾಧಾನಕ್ಕೆ ಕಾರಣವಾಗಿದೆ.</p>.<p>ವರ್ಗಾವಣೆಗೊಂಡು ಕೌನ್ಸೆಲಿಂಗ್ ಮುಗಿಸಿರುವ ಎಲ್ಲಾ ಸಿಬ್ಬಂದಿಯನ್ನು ಇದೇ 5ರಂದು ಬಿಡುಗಡೆಗೊಳಿಸುವುದಾಗಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿತ್ತು. ಆದರೆ, ಕೊನೇ ಕ್ಷಣದಲ್ಲಿ ತನ್ನ ಆದೇಶ ಬದಲಿಸಿ, ಬಿಡುಗಡೆ ಮಾಡದಿರಲು ತೀರ್ಮಾನಿಸಿದೆ.</p>.<p>ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) ಹೊಸದಾಗಿ ತಾಂತ್ರಿಕ ಸಿಬ್ಬಂದಿ ನೇಮಕ ಆಗುವ ತನಕ ವರ್ಗಾವಣೆಗೊಂಡ ಸಿಬ್ಬಂದಿ ಮೂಲ ಸ್ಥಳದಲ್ಲಿಯೇ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದೆ. ಇದರಿಂದ ಬೇರೆ ನಿಗಮದ ತಾಂತ್ರಿಕ ಸಿಬ್ಬಂದಿ ಬಿಡುಗಡೆಗೊಳ್ಳಲು ಸಾಧ್ಯವಾಗುತ್ತಿಲ್ಲ.</p>.<p>ಕೆಎಸ್ಆರ್ಟಿಸಿಯಿಂದ 430 ಸಿಬ್ಬಂದಿ ಬಿಡುಗಡೆಯಾಗಬೇಕಿದ್ದು, ಬಿಎಂಟಿಸಿಯಿಂದ 367 ಸಿಬ್ಬಂದಿ ಕೆಎಸ್ಆರ್ಟಿಸಿಗೆ ಬರಬೇಕಿದೆ. ಅವರು ಬಂದು ವರದಿ ಮಾಡಿಕೊಳ್ಳದೆ ಬಿಡುಗಡೆ ಮಾಡಿದರೆ ವಾಹನಗಳ ನಿರ್ವಹಣೆ ಕಷ್ಟವಾಗಲಿದೆ. ಹೀಗಾಗಿ, ತಾಂತ್ರಿಕ ಸಿಬ್ಬಂದಿಯನ್ನು ಬಿಡುಗಡೆ ಮಾಡುವುದಿಲ್ಲ ಎಂದು ನಿಗಮ ಸ್ಪಷ್ಟಪಡಿಸಿದೆ.</p>.<p>‘ಇದೇ 5ಕ್ಕೆ ಬಿಡುಗಡೆಯಾಗುವುದು ಖಾತ್ರಿಯಾಗಿದ್ದರಿಂದ ಮನೆಗಳನ್ನು ಖಾಲಿ ಮಾಡಿ, ವರ್ಗಾವಣೆಗೊಂಡಿರುವ ಊರುಗಳಲ್ಲಿ ಮನೆ ಮಾಡಿದ್ದೇವೆ. ಈಗ ಬಿಡುಗಡೆ ಮಾಡದಿದ್ದರೆ ಅತಂತ್ರರಾಗಲಿದ್ದೇವೆ. ಹೀಗಾಗಿ ಹೊಸ ಆದೇಶ ಹಿಂಪಡೆಯಬೇಕು’ ಎಂದು ತಾಂತ್ರಿಕ ಸಿಬ್ಬಂದಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಂತರ ನಿಗಮ ವರ್ಗಾವಣೆಗೊಂಡಿರುವ ತಾಂತ್ರಿಕ ಸಿಬ್ಬಂದಿಯನ್ನು ಸದ್ಯಕ್ಕೆ ಬಿಡುಗಡೆ ಮಾಡದಿರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ನಿರ್ಧರಿಸಿದ್ದು, ಇದು ನೌಕರರ ಅಸಮಾಧಾನಕ್ಕೆ ಕಾರಣವಾಗಿದೆ.</p>.<p>ವರ್ಗಾವಣೆಗೊಂಡು ಕೌನ್ಸೆಲಿಂಗ್ ಮುಗಿಸಿರುವ ಎಲ್ಲಾ ಸಿಬ್ಬಂದಿಯನ್ನು ಇದೇ 5ರಂದು ಬಿಡುಗಡೆಗೊಳಿಸುವುದಾಗಿ ಕೆಎಸ್ಆರ್ಟಿಸಿ ಆದೇಶ ಹೊರಡಿಸಿತ್ತು. ಆದರೆ, ಕೊನೇ ಕ್ಷಣದಲ್ಲಿ ತನ್ನ ಆದೇಶ ಬದಲಿಸಿ, ಬಿಡುಗಡೆ ಮಾಡದಿರಲು ತೀರ್ಮಾನಿಸಿದೆ.</p>.<p>ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) ಹೊಸದಾಗಿ ತಾಂತ್ರಿಕ ಸಿಬ್ಬಂದಿ ನೇಮಕ ಆಗುವ ತನಕ ವರ್ಗಾವಣೆಗೊಂಡ ಸಿಬ್ಬಂದಿ ಮೂಲ ಸ್ಥಳದಲ್ಲಿಯೇ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದೆ. ಇದರಿಂದ ಬೇರೆ ನಿಗಮದ ತಾಂತ್ರಿಕ ಸಿಬ್ಬಂದಿ ಬಿಡುಗಡೆಗೊಳ್ಳಲು ಸಾಧ್ಯವಾಗುತ್ತಿಲ್ಲ.</p>.<p>ಕೆಎಸ್ಆರ್ಟಿಸಿಯಿಂದ 430 ಸಿಬ್ಬಂದಿ ಬಿಡುಗಡೆಯಾಗಬೇಕಿದ್ದು, ಬಿಎಂಟಿಸಿಯಿಂದ 367 ಸಿಬ್ಬಂದಿ ಕೆಎಸ್ಆರ್ಟಿಸಿಗೆ ಬರಬೇಕಿದೆ. ಅವರು ಬಂದು ವರದಿ ಮಾಡಿಕೊಳ್ಳದೆ ಬಿಡುಗಡೆ ಮಾಡಿದರೆ ವಾಹನಗಳ ನಿರ್ವಹಣೆ ಕಷ್ಟವಾಗಲಿದೆ. ಹೀಗಾಗಿ, ತಾಂತ್ರಿಕ ಸಿಬ್ಬಂದಿಯನ್ನು ಬಿಡುಗಡೆ ಮಾಡುವುದಿಲ್ಲ ಎಂದು ನಿಗಮ ಸ್ಪಷ್ಟಪಡಿಸಿದೆ.</p>.<p>‘ಇದೇ 5ಕ್ಕೆ ಬಿಡುಗಡೆಯಾಗುವುದು ಖಾತ್ರಿಯಾಗಿದ್ದರಿಂದ ಮನೆಗಳನ್ನು ಖಾಲಿ ಮಾಡಿ, ವರ್ಗಾವಣೆಗೊಂಡಿರುವ ಊರುಗಳಲ್ಲಿ ಮನೆ ಮಾಡಿದ್ದೇವೆ. ಈಗ ಬಿಡುಗಡೆ ಮಾಡದಿದ್ದರೆ ಅತಂತ್ರರಾಗಲಿದ್ದೇವೆ. ಹೀಗಾಗಿ ಹೊಸ ಆದೇಶ ಹಿಂಪಡೆಯಬೇಕು’ ಎಂದು ತಾಂತ್ರಿಕ ಸಿಬ್ಬಂದಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>