ಶನಿವಾರ ಇಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಮಾವೇಶದಲ್ಲಿ ವಿವಿಧ ಕಂಪೆನಿಗಳಲ್ಲಿ ಮಾನವ ಸಂಪನ್ಮೂಲ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಬಂಟ ಸಮುದಾಯದವರ ಸಭೆ ನಡೆಯಲಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು, ಉದ್ಯಮಿಗಳು ಸಂವಾದ, ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಪ್ರತಿಭಾನ್ವಿತ ಯುವಕ–ಯುವತಿಯರಿಗೆ ‘ಯುವೈಕ್ಯ ಪುರಸ್ಕಾರ’ ನೀಡಲಾಗುವುದು’ ಎಂದರು.