ಪತ್ನಿ ಸಾಯುತ್ತಿದ್ದಂತೆಯೇ ಗಾಬರಿಗೆ ಬಿದ್ದ ಆತ, ಬಳಿಕ ಆತ್ಮಹತ್ಯೆ ಮಾಡಿಕೊಳ್ಳಲು ತಾನೂ ಕುತ್ತಿಗೆ ಕುಯ್ದುಕೊಂಡಿದ್ದ. ಅದೇ ಕಾಲೊನಿಯಲ್ಲಿ ನೆಲೆಸಿರುವ ಲಕ್ಷ್ಮಿ ತಾಯಿ ಲಕ್ಷ್ಮಮ್ಮ, ಮಧ್ಯಾಹ್ನ 12.30ರ ಸುಮಾರಿಗೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಕೂಡಲೇ ಪೊಲೀಸರಿಗೆ ವಿಷಯ ತಿಳಿಸಲಾಗಿತ್ತು. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಶಂಕರ್ನನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದರು.