ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ದಾಮೋದರ ದಾಸ ಮೋದಿ ಶುಕ್ರವಾರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಗುರುವಾರ ಸಂಜೆ ನಗರಕ್ಕೆ ಬಂದಿರುವ ಅವರು, ಮಾಗಡಿ ರಸ್ತೆಯ ಟೋಲ್ಗೇಟ್ ಬಳಿಯ ಶ್ರೀ ಸ್ವಾಮಿನಾರಾಯಣ ಮಂದಿರಕ್ಕೆ ಭೇಟಿ ನೀಡಿ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ 8ಕ್ಕೆ ನೆಲಮಂಗಲದಲ್ಲಿರುವ ಗಾಣಿಗ ಸಮಾಜ ಭವನಕ್ಕೆ ಭೇಟಿ ನೀಡುವರು. 10ಕ್ಕೆ ಬಸವನಗುಡಿ ವಿದ್ಯಾಪೀಠದಲ್ಲಿರುವ ಶ್ರೀ ಕೃಷ್ಣ ಶಾಲೆಯಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.