ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಬಳಿಕ ಸಿದ್ದರಾಮಯ್ಯ, ಪಕ್ಷದಲ್ಲಿ ಪ್ರಬಲ ನಾಯಕರಾಗಿ ಹೊರಹೊಮ್ಮಿದ್ದಾರೆ. ಪರಿಣಾಮಕಾರಿ ಕಾರ್ಯತಂತ್ರಗಳ ಮೂಲಕ ಬಿಜೆಪಿ ಸವಾಲು ಎದುರಿಸುವಲ್ಲಿ ಸಫಲರಾಗಿರುವ ಅವರು, ರಾಹುಲ್ ಗಾಂಧಿಗೂ ಹತ್ತಿರವಾಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಯಾರ ಮಾತೂ ಕೇಳುತ್ತಿಲ್ಲ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಆಕ್ಷೇಪಿಸಿದರು.