ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಸಂಚಾಲಕ ಎಸ್.ಆರ್.ಹಿರೇಮಠ್, ‘ನಿರುದ್ಯೋಗ ದೇಶದ ದೊಡ್ಡ ಸಮಸ್ಯೆ. ಅಧಿಕಾರದಲ್ಲಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಈ ಸಮಸ್ಯೆ ಬಗೆಹರಿಸುವ ಬದಲು ಸ್ವಾರ್ಥ ಹಾಗೂ ಧರ್ಮ ರಾಜಕಾರಣ ಮಾಡುತ್ತಿವೆ. ಹೀಗಾಗಿ, ಉದ್ಯೋಗ ಕಲ್ಪಿಸುವ ಸ್ಪಷ್ಟ ಭರವಸೆ ನೀಡುವ ಪಕ್ಷಕ್ಕೆ ಮತ ಹಾಕುವಂತೆ ಯುವಕರಲ್ಲಿ ಅರಿವು ಮೂಡಿಸುತ್ತೇವೆ’ ಎಂದು ಹೇಳಿದರು.