‘ಪಟ್ಟಣದ ಸುತ್ತಲಿನ ಬಸವಪುರ, ಗೆಣಿಕೆಹಾಳು, ಕ್ಯಾದಿಗೆಹಾಳು ಮತ್ತು ಮುಷ್ಟಘಟ್ಟೆ ಗ್ರಾಮಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ವೇಳೆಯಲ್ಲಿ ಸಮರ್ಪಕವಾದ ಬಸ್ ಸೌಲಭ್ಯವಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಪರ್ಯಾಯವಾಗಿ ಆಟೊಗಳ ಹಾಗೂ ನಡೆದುಕೊಂಡು ಮನೆ ಸೇರುವಂತಾಗಿದೆ. ಈ ಕುರಿತು ಸಾರಿಗೆ ಇಲಾಖೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ. ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ಉಗ್ರವಾದ ಹೋರಾಟ ಮಾಡಲಾಗುವುದು’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದ ಎಚ್ಚರಿಸಿದರು.