ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯ್ಯಪ್ಪಸ್ವಾಮಿಗೆ ವಿಶೇಷ ಪೂಜೆ

Last Updated 14 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹಳೆ ಮದ್ರಾಸ್ ರಸ್ತೆಯಲ್ಲಿರುವ ಬಿ.ಎಂ.ಕೃಷ್ಣಮೂರ್ತಿನಗರದಲ್ಲಿ ಭಾನುವಾರ ಅಯ್ಯಪ್ಪಸ್ವಾಮಿಗೆ ವಿಶೇಷ ಮಕರ ಜ್ಯೋತಿ ಪೂಜೆ ನೆರವೇರಿಸಲಾಯಿತು.

ದೇವರಿಗೆ ವಿಶೇಷ ಅಲಂಕಾರ ಮಾಡಲು ಭಕ್ತರು ಆಭರಣಗಳನ್ನು ತಲೆ ಮೇಲೆ ಹೊತ್ತು ಭಜನೆ ಮಾಡುತ್ತಾ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಬಳಿಕ ಆ ಆಭರಣಗಳಿಂದ ದೇವರಿಗೆ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

‘ಏಳು ದಿನಗಳಿಂದ ಮಹಾಗಣಪತಿ ಹೋಮ, ತುಪ್ಪದ ಅಭಿಷೇಕ, ವೈಕುಂಠ ಏಕಾದಶಿ ವಿಶೇಷ ಪೂಜೆ, ದೀಪ ಪೂಜೆ ಸೇರಿದಂತೆ ಹಲವು ಪೂಜಾ ಕಾರ್ಯಗಳನ್ನು ನಡೆಸಲಾಗಿದೆ’ ಎಂದು ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಕೆ. ಮನಮೋಹನ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT