ಈ ವರ್ಷ ಮಕರ ಸಂಕ್ರಾತಿ ಹಬ್ಬಕ್ಕೆ ಒಂದು ದಿನ ಮುಂಚಿತವಾಗಿಯೇ ಸೂರ್ಯನ ಕಿರಣಗಳು ಲಿಂಗವನ್ನು ಸ್ಪರ್ಶಿಸಿವೆ. ನೇಸರ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಾಯಿಸುವ ಪುಣ್ಯಕಾಲದಲ್ಲಿ ಸಂಭವಿಸುವ ಈ ವಿದ್ಯಮಾನವನ್ನು ನೋಡಲು ಸಾವಿರಾರು ಮಂದಿ ಸೇರಿದ್ದರು. ಮೈಸೂರು, ಮಂಡ್ಯ, ತುಮಕೂರು, ದೂರದ ಕಲುಬುರ್ಗಿ, ದಾವಣಗೆರೆಯಿಂದಲೂ ಭಕ್ತರು ಬಂದಿದ್ದರು.