ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ, ಒಬ್ಬ ಭಾರತೀಯ ಯೋಧ ಹುತಾತ್ಮ

Last Updated 18 ಜನವರಿ 2018, 11:07 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮುಕಾಶ್ಮೀರದ ಸಾಂಬಾ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ, ನಾಗರಿಕರು ಮತ್ತು ಭಾರತೀಯ  ಯೋಧರ ಮೇಲೆ ಶೆಲ್ ದಾಳಿ ನಡೆಸಿದೆ. ಒಬ್ಬ ಬಿಎಸ್‌ಎಫ್ ಯೋಧ ಹುತಾತ್ಮರಾಗಿದ್ದಾರೆ.

ಪಾಕಿಸ್ತಾನದ ಈ ದಾಳಿಯಲ್ಲಿ ನೀಲಮ್ ದೇವಿ(17) ಎಂಬ ಯುವತಿಯು ಸಾವಿಗೀಡಾಗಿದ್ದಾಳೆ. ಒಬ್ಬ ಯೋಧ ಹಾಗೂ 5 ಮಂದಿ ನಾಗರಿಕರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮೃತ ಯೋಧನನ್ನು ಎ. ಸುರೇಶ್ ಎಂದು ಗುರುತಿಸಲಾಗಿದೆ. ತಮಿಳುನಾಡಿನವರಾದ ಇವರು ಬಿಎಸ್‌ಎಫ್ ಪಡೆಯ 78 ಬೆಟಾಲಿಯನ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಪಾಕಿಸ್ತಾನ ಯೋಧರು ಆರ್‌.ಎಸ್ ಪುರ, ಅಮಿಯಾ, ರಾಮ್‌ಘರ್ ವಲಯದಲ್ಲಿ ಶೆಲ್‌ ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ.  ಗಡಿ ಭಾಗದಲ್ಲಿನ 20 ಗುಡ್ಡಗಾಡು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಯೋಧರು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT